ಕಂದಾಯ ಸಚಿವ ಆರ್.ಅಶೋಕ್ 
ರಾಜಕೀಯ

ಸಾವರ್ಕರ್ V/s ನೆಹರು: ಸಾವರ್ಕರ್ ಫೋಟೋ ತೆಗೆದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ

ವಿಧಾನಸಭೆಯಲ್ಲಿ  ಈ ಹಿಂದೆ ಬಿಜೆಪಿ ಸರ್ಕಾರ ಅಳವಡಿಸಿದ್ದ ವೀರ್ ಸಾವರ್ಕರ್ ಅವರ ಫೋಟೋ ತೆಗೆಯದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ವಿಧಾನಸಭೆಯಲ್ಲಿ  ಈ ಹಿಂದೆ ಬಿಜೆಪಿ ಸರ್ಕಾರ ಅಳವಡಿಸಿದ್ದ ವೀರ್ ಸಾವರ್ಕರ್ ಅವರ ಫೋಟೋ ತೆಗೆಯದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅಶೋಕ್, ಕಾಂಗ್ರೆಸ್ ಸರ್ಕಾರ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕಿ, ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ಅಳವಡಿಸಲು ಯೋಜಿಸಿದೆ. ಆದರೆ ವೀರ ಸಾವರ್ಕರ್ ಅವರು ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಜೈಲುವಾಸ ಅನುಭವಿಸಿದ ದೇಶಪ್ರೇಮಿ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರ ಸಾವರ್ಕರ್ ಅವರ ಭಾವಚಿತ್ರವನ್ನು ಅಳವಡಿಸಿತ್ತು. ಈಗ ಅದನ್ನು ತೆಗೆದುಹಾಕಲು ಕಾಂಗ್ರೆಸ್ ಮುಂದಾಗಿದೆ. ಸಾವರ್ಕರ್ ಫೋಟೋದ ಬದಲು ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಫೋಟೋವನ್ನು ಹಾಕಬೇಕೆಂದು ಅವರು(ಸರ್ಕಾರ) ವಾದಿಸುತ್ತಿದ್ದಾರೆ. ನೆಹರೂ ಭಾವಚಿತ್ರ ಅಳವಡಿಸುವುದು ವಂಶಪಾರಂಪರ್ಯ ರಾಜಕಾರಣದ ವೈಭವೀಕರಣ ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಜ್ಜ, ತಾಯಿ, ಮಗ ಮತ್ತು ಮೊಮ್ಮಗನ ಫೋಟೋಗಳನ್ನು ಮಾತ್ರ ಹಾಕಲು ಬಯಸುತ್ತದೆ. ಒಂದು ವೇಳೆ ಸಾವರ್ಕರ್ ಫೋಟೋ ತೆಗೆದರೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದರು.

ವಸತಿ ಸಚಿವ ಜಮೀರ್ ಅಹ್ಮದ್ ಅವರು ಕೋಮುವಾದಿ ಹೇಳಿಕೆ ನೀಡಿದ್ದಾರೆ. ಸ್ಪೀಕರ್ ಮುಸ್ಲಿಂ ಎಂದು ಹೇಳಿಕೆ ನೀಡಿದ್ದು, ಅವರಿಗೆ ನಮನ ಸಲ್ಲಿಸುವಂತೆ ಕಾಂಗ್ರೆಸ್ ನಮಗೆ ಒತ್ತಾಯಿಸುತ್ತಿದೆ. ಆದರೆ, ನಾವು ಅವರ ಸ್ಥಾನಕ್ಕೆ ಗೌರವ ನೀಡುತ್ತೇವೆ ಎಂದರು.

2022ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ಚಳಿಗಾಲದ ಅಧಿವೇಶನದ ಮೊದಲ ದಿನ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿತ್ತು. ಸುವರ್ಣ ವಿಧಾನಸೌಧದಲ್ಲಿ ವಿವಾದಿತ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT