ಶಾಸಕ ಬಸನಗೌಡ ಪಾಟೀಲ ಯತ್ನಾಳ್ 
ರಾಜಕೀಯ

ಹೇ ಪ್ರಭು! ಚಹಾ ಮಾರಿಕೊಂಡು ಆದರೂ ಬದುಕಬಹುದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ! ಯತ್ನಾಳ್ ಹೇಳಿದ್ದು ಯಾರಿಗೆ?

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾರ್ಮಿಕವಾಗಿ ಫೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ಟೀಕೆಗಳಿಗೆ ಪ್ರತಿಕ್ರಿಯಿಸುತ್ತಿದ್ದಾರೆ. 

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾದ ನಂತರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾರ್ಮಿಕವಾಗಿ ಫೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ಟೀಕೆಗಳಿಗೆ ಪ್ರತಿಕ್ರಿಯಿಸುತ್ತಿದ್ದಾರೆ. 

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ!! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! "ಜಾರಿದವರ ಯತ್ನ ಬೆಲ್ಲ" ಆಗ್ಲಿಲ್ಲವಲ್ಲಪ್ಪ ಎಂಬ ಕಾಂಗ್ರೆಸ್ ಫೋಸ್ಟ್ ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಹೇ ಪ್ರಭು! ಚಹಾ ಮಾರಿಕೊಂಡು ಆದರೂ ಬದುಕಬಹದು, ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ! ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ವರ್ಗಾವಣೆ ವಿಚಾರದಲ್ಲಿ ಕುಮಾರಸ್ವಾಮಿ ಆರೋಪಿಸಿದ ಆ ವಿವೇಕಾನಂದ ಬೇರೆ, "ಹಲೋ ಅಪ್ಪ" ವಿವೇಕಾನಂದ ಬೇರೆ! ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ ಎಂದು  ಪೋಸ್ಟ್ ಮಾಡಿದ್ದಾರೆ. ಇದು ಸಿದ್ದರಾಮಯ್ಯ ಅವರನ್ನು ಸಮರ್ಥನೆಯ ಹೇಳಿಕೆಯೋ ಅಥವಾ ಟೀಕೆಯೋ ಗೊತ್ತಿಲ್ಲ. ಇದಕ್ಕೂ ಮುನ್ನ ನ ದೈನ್ಯಂ, ನ ಪಲಾಯನಂ, ಯೋಧ ಎಂದಿಗೂ ದೂರಲಾರ ಅಥವಾ ವಿಷಾದ ವ್ಯಕ್ತಪಡಿಸಲಾರ ಎಂದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ; ಇರಾನ್‌ಗೆ ಮುಖಭಂಗ; Video

'ಒಂದು ವೇಳೆ ಬದುಕಿದ್ದರೆ, ಹುಡುಕಿ ಕೊಲ್ಲುತ್ತೇವೆ': ಬೆಂಜಮಿನ್ ನೆತನ್ಯಾಹು ಸಾವಿನ ವದಂತಿಗಳ ನಡುವೆ ಇರಾನ್ ಎಚ್ಚರಿಕೆ!

ಯುದ್ಧ: ಮೊದಲ ಬಾರಿಗೆ Dancing Missile ಉಡಾಯಿಸಿದ Iran; 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ಬಾಲಿವುಡ್ ನಟಿ ಮಧು ಮಲ್ಹೋತ್ರಾ ನಿಧನ

Reels ಗೀಳಿಗೆ ಮತ್ತೊಂದು ಬಲಿ: Delhi–Mumbai Expresswayನಲ್ಲಿ ಕ್ಯಾಂಟರ್ ಢಿಕ್ಕಿ, ಯುವಕ ಸಾವು! Video

SCROLL FOR NEXT