ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ 
ರಾಜಕೀಯ

ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ; ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಬಿಜೆಪಿ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕಲಬುರಗಿ/ ಬೆಂಗಳೂರು: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ರಾಠೋಡ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಈ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮುಖಂಡ ರಾಠೋಡ್ ಗೆ ಇನ್ನಿಲ್ಲದಂತೆ ಟಾರ್ಗೆಟ್ ಮಾಡಿ, ಕಿರುಕುಳ ನೀಡಿದ್ದಾರೆ. ಅವರ ಜೀವಕ್ಕೆ ಏನಾದರೂ ಹಾನಿಯಾದರೆ, ಅದಕ್ಕೆ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಸರ್ಕಾರ ನೇರ ಹೊಣೆ ಎಂದು ಎಚ್ಚರಿಕೆ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು