ರಾಜಕೀಯ

ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ: ಬಿಜೆಪಿ ಸಂಘಟನೆಗೆ ಒತ್ತು

Sumana Upadhyaya

ಮೈಸೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಮೇಲೆ ಬಿ ವೈ ವಿಜಯೇಂದ್ರ ಅವರು ಆರಂಭದಲ್ಲಿ ಕಾರ್ಯಕರ್ತರು, ನಂತರ ಟೆಂಪಲ್ ರನ್, ಮಠಗಳ ಭೇಟಿ ಜೊತೆಗೆ ಗಣ್ಯರು, ಸಾಹಿತಿಗಳ ಭೇಟಿ ಮಾಡುತ್ತಿದ್ದಾರೆ.

ಇಂದು ಮೈಸೂರಿನ ಕುವೆಂಪುನಗರದಲ್ಲಿ ನಾಡಿನ ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಅವರಿಗೆ ಹೂಗುಚ್ಛ ನೀಡಿ, ಶಾಲು, ಹಾರ ಹಾಕಿ ಸನ್ಮಾನಿಸಿದರು. 

ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ನನ್ನ ಮೊದಲ ಆದ್ಯತೆ. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ರಾಜ್ಯದಲ್ಲಿ 28 ಕ್ಷೇತ್ರಗಳನ್ನೂ ಗೆದ್ದು ಮೋದಿ ಕೈಬಲಪಡಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇವೆ. ಮೈಸೂರು ನನಗೆ ಅವಿನಾಭಾವ ಸಂಬಂಧ ಹೊಂದಿರುವ ಜಿಲ್ಲೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ಎಂದು ಹೇಳಿದರು.

SCROLL FOR NEXT