ಬಿವೈ ವಿಜಯೇಂದ್ರ 
ರಾಜಕೀಯ

ಕರ್ನಾಟಕ ರಾಜಕೀಯ: ಕುಟುಂಬ ರಾಜಕಾರಣ ಎಂಬ ಟೀಕೆ ಇನ್ಮುಂದೆ ಮಹತ್ವ ಕಳೆದುಕೊಳ್ಳುವ ಸಾಧ್ಯತೆ!

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕವಾಗಿದ್ದು, ಅದರ ಮಿತ್ರ ಪಕ್ಷ ಜೆಡಿಎಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿರುವುದರಿಂದ ಕರ್ನಾಟಕ ರಾಜಕೀಯದಲ್ಲಿ ಕುಟುಂಬ ರಾಜಕಾರಣ ವಿಶಿಷ್ಠ ಸ್ಥಾನ ಪಡೆದಿದೆ. 

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕವಾಗಿದ್ದು, ಅದರ ಮಿತ್ರ ಪಕ್ಷ ಜೆಡಿಎಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾಗಿರುವುದರಿಂದ ಕರ್ನಾಟಕ ರಾಜಕೀಯದಲ್ಲಿ ಕುಟುಂಬ ರಾಜಕಾರಣ ವಿಶಿಷ್ಠ ಸ್ಥಾನ ಪಡೆದಿದೆ. ಬಿಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ದೇವೇಗೌಡ ಅವರ ಕುಟುಂಬದ ಸುತ್ತ ನಡೆಯುತ್ತಿದ್ದ ಕುಟುಂಬ ರಾಜಕಾರಣದ ಟೀಕೆಗಳು ಅಂತ್ಯಗೊಳ್ಳುವ ಸಾಧ್ಯತೆಯಿದೆ. 

ಯಡಿಯೂರಪ್ಪ ಮತ್ತು ಗೌಡರು ರಾಜ್ಯ ರಾಜಕೀಯದಲ್ಲಿ ಪ್ರಭಾವ ಶಾಲಿಯಾಗಿಯೇ ಉಳಿದಿದ್ದಾರೆ. ಕರ್ನಾಟಕದ ವಿಷಯಕ್ಕೆ ಬಂದಾಗ ಈ ಸತ್ಯವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಬಿಜೆಪಿ ವರಿಷ್ಠರು ಸಾಬೀತುಪಡಿಸಿದ್ದಾರೆ ಎಂದು ರಾಜಕೀಯ ಪಂಡಿತರು ಪರಿಗಣಿಸಿದ್ದಾರೆ. ಈ ಬೆಳವಣಿಗೆಯು ಕರ್ನಾಟಕದಲ್ಲಿ ಕುಟುಂಬ ರಾಜಕಾರಣದ ಕಟುವಾದ ಟೀಕೆಗಳು ಇನ್ನು ಮುಂದೆ ಚುನಾವಣಾ ಪ್ರಚಾರಗಳಲ್ಲಿ ಸ್ಥಾನ ಪಡೆಯುವುದಿಲ್ಲ ಅನಿಸುತ್ತದೆ. 

ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ವಿರೋಧ ಪಕ್ಷಗಳಲ್ಲಿರುವ ತಮ್ಮ ಪ್ರತಿಸ್ಪರ್ಧಿಗಳನ್ನು ಕುಟುಂಬ ರಾಜಕಾರಣ ಹಿನ್ನೆಲೆಯಲ್ಲಿ ಕಟುವಾಗಿ ಟೀಕಿಸಿದ್ದಕ್ಕಾಗಿ ಕ್ಷಮೆಯಾಚಿಸುವ ಮೂಲಕ ಮುಜುಗರಕ್ಕೊಳಗಾಗಿದ್ದಾರೆ. “ನಾನು ಒಂದು ದಿನದ ಹಿಂದೆ ಹೇಳಿದ್ದನ್ನು ಈಗ ಹೇಳಲಾಗುವುದಿಲ್ಲ, ಏಕೆಂದರೆ ಅದನ್ನು ತಪ್ಪಾಗಿ ಅರ್ಥೈಸಬಹುದು. ನನ್ನ ಪಕ್ಷದ ನಿಲುವಿನಿಂದಾಗಿ ನಾನು ಯಾರನ್ನಾದರೂ ( ಕುಟುಂಬ ರಾಜಕಾರಣ) ಟೀಕಿಸಿದರೆ, ಅವರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಸುದ್ದಿಗಾರರಿಗೆ ಉತ್ತರಿಸಿದರು.

ಕುಟುಂಬ ರಾಜಕಾರಣಕ್ಕೆ ವಿರುದ್ಧವಾಗಿರುವ ಬಿಜೆಪಿ ಈಗ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡುವ ಮೂಲಕ ಅದನ್ನು ಪ್ರೋತ್ಸಾಹಿಸುತ್ತಿದೆ. ಕುಟುಂಬ ರಾಜಕಾರಣದ ವಿರುದ್ಧ ಇದ್ದ ಅನೇಕ ನಾಯಕರು ಈಗ ಅದರ ಬಗ್ಗೆ ಮಾತನಾಡಲು ಹೆದರುತ್ತಿದ್ದಾರೆ. ಆದರೆ ವಿಜಯಪುರ ಸಂಸದ ರಮೇಶ ಜಿಗಜಿಣಗಿಯಂತಹ ಅನುಭವಿಗಳು ವಿಜಯೇಂದ್ರ ಅವರ ನೇಮಕವನ್ನು ಟೀಕಿಸುವ ಸ್ವಾತಂತ್ರ್ಯವನ್ನು ತೆಗೆದುಕೊಂಡಿದ್ದಾರೆ. “ನಾವು ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಿಲ್ಲ, ಆದರೆ ಪಕ್ಷದ ಹೈಕಮಾಂಡ್ ಅವರು ಯಡಿಯೂರಪ್ಪನವರ ಪುತ್ರ ಎಂದು ಭಾವಿಸಿದ್ದರಿಂದ ಅವರನ್ನು ನೇಮಿಸಿತು. ಸ್ವಾತಂತ್ರ್ಯ ಬಂದಾಗಿನಿಂದ ನಾವು ದಲಿತರು ಅಸೆಂಬ್ಲಿಯಲ್ಲಿ ಅಥವಾ ಲೋಕಸಭೆಯಲ್ಲಿ ಇತರರಿಗೆ ಕೈ ಎತ್ತಿದ್ದೇವೆ, ಆದರೆ ಯಾರೂ ನಮ್ಮ (ದಲಿತರು) ಪರವಾಗಿ ಕೈ ಎತ್ತಲಿಲ್ಲ. ಇದು ವಿಷಾದದ ಸಂಗತಿ ಎಂದಿದ್ದಾರೆ. 

ಕಾಂಗ್ರೆಸ್ ಮತ್ತು ಅದರ ನಾಯಕತ್ವವು ಬಹಳ ಹಿಂದೆಯೇ ಕುಟುಂಬ ರಾಜಕೀಯವನ್ನು ಒಪ್ಪಿಕೊಂಡಿದೆ ಎಂದು ರಾಜಕೀಯ ವಿಶ್ಲೇಷಕ ಮತ್ತು ಮಾಜಿ ಪತ್ರಕರ್ತ ಟಿಕೆ ಪ್ರದೀಪ್ ಕುಮಾರ್ ಹೇಳಿದರು.“ಬಿಜೆಪಿ ನಾಯಕತ್ವವು ಕುಟುಂಬ ರಾಜಕಾರಣವನ್ನು ತೊಡೆದುಹಾಕಲು ಪ್ರಯತ್ನಿಸಿತು ಆದರೆ ವಿಧಾನಸಭೆ ಚುನಾವಣೆಯಲ್ಲಿ ವಿಫಲವಾಗಿದೆ. ವಿಜಯೇಂದ್ರ ಅವರ ನೇಮಕ ಜನಸಾಮಾನ್ಯರು ರಾಜಕೀಯವಾಗಿ ಪ್ರಬುದ್ಧರಾಗುವವರೆಗೆ ಕುಟುಂಬ ರಾಜಕಾರಣವನ್ನು ಪ್ರೋತ್ಸಾಹಿಸುತ್ತದೆ. ಜನರು ಮತ ಚಲಾಯಿಸುವಾಗ ಕುಟುಂಬ, ಜಾತಿಯನ್ನು ಬದಿಗಿರಿಸಿ ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT