ಡಿಸಿಎಂ ಡಿ ಕೆ ಶಿವಕುಮಾರ್ 
ರಾಜಕೀಯ

ಜಾತಿ ಗಣತಿ ವರದಿಗೆ ಡಿಕೆಶಿಯಿಂದಲೇ ವಿರೋಧ; ವರದಿ ತಿರಸ್ಕಾರ ಮನವಿಗೆ ಸಹಿ ಹಾಕಿದ ಡಿಸಿಎಂ

ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ಡಿಸಿಎಂ ಸಹಿ ಹಾಕಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ಡಿಸಿಎಂ ಸಹಿ ಹಾಕಿದ್ದಾರೆ.

ಈ ಮೂಲಕ ಎಚ್‌. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ಅಧಿಕೃತವಾಗಿ ವಿರೋಧ ವ್ಯಕ್ತಪಡಿಸಿದಂತೆ ಆಗಿದೆ.

ಕಾಂತರಾಜು ಆಯೋಗದ ವರದಿ ತಿರಸ್ಕರಿಸುವ ಸಂಬಂಧ ಒಕ್ಕಲಿಗರ ಸಂಘ ಮನವಿ ಪತ್ರವನ್ನು ಸಿದ್ಧಪಡಿಸಿತ್ತು. ಇದಕ್ಕೆ ಈಗ ಡಿ.ಕೆ. ಶಿವಕುಮಾರ್‌ ಅವರ ಸಹಿಯನ್ನು ಪಡೆದುಕೊಳ್ಳಲಾಗಿದ್ದು, ಆ ಪತ್ರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಲಾಗಿದೆ. ಇದರ ಮನವಿ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಲ್ಲಿಸಲಾಗಿದೆ.

ಈ ಮನವಿ ಪತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ, ಎಚ್ ಡಿ ಕುಮಾರಸ್ವಾಮಿ, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಒಕ್ಕಲಿಗ ಸಮುದಾಯದ ಹಲವು ಶಾಸಕರು ಸಹಿ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT