ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'ಬಲ'ಕ್ಕೆ ವಾಲುತ್ತಿದ್ದಾರಾ ಕುಮಾರಸ್ವಾಮಿ?; ಸಮಯ ಬಂದ್ರೆ ದತ್ತಮಾಲೆ ಧಾರಣೆ: ಎಚ್‌ಡಿಕೆಗೆ ಹಿಂದೂಪರ ಸಂಘಟನೆಗಳ ಬೆಂಬಲ

ಮೇ 10ರ ವಿಧಾನಸಭಾ ಚುನಾವಣೆಯವರೆಗೂ ಹಿಂದೂಪರ ಸಂಘಟನೆಗಳಿಂದ ದೂರವಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ ಎಂಬ ಹೇಳಿಕೆಗೆ ಹಲವಾರು ಮಂದಿ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: ಮೇ 10ರ ವಿಧಾನಸಭಾ ಚುನಾವಣೆಯವರೆಗೂ ಹಿಂದೂಪರ ಸಂಘಟನೆಗಳಿಂದ ದೂರವಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ ಎಂಬ ಹೇಳಿಕೆಗೆ ಹಲವಾರು ಮಂದಿ ಬೆಂಬಲ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿ, ಅವಶ್ಯಕತೆ ಇದ್ದರೆ ದತ್ತಮಾಲೆ ಧರಿಸುವುದಾಗಿ ತಿಳಿಸಿದ್ದರು. ಕಾನೂನು ಬಾಹಿರವಾದ ಯಾವ ಕೆಲಸವನನೂ ನಾನು ಮಾಡಲಾರೆ. ದತ್ತಮಾಲೆ ಧರಿಸುವುದು ಕಾನೂನು ಬಾಹಿರವಲ್ಲ. ಧರಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದರು.

ಕುಮಾರಸ್ವಾಮಿ ಹೇಳಿಕೆಯಿಂದ ಹೇಳಿಕೆಯಿಂದ ಏಕಾಏಕಿ ಹಲವಾರು ಬೆಂಬಲಿಗರನ್ನು ಪಡೆದಿದ್ದಾರೆ. ಚಿಕ್ಕಮಗಳೂರಿನ ದತ್ತ ಪೀಠಕ್ಕೆ ಭೇಟಿ ನೀಡುವ ಭಕ್ತರು ಅನುಸರಿಸುವ ವಾರ್ಷಿಕ ಹಿಂದೂ ಆಚರಣೆಯಾಗಿದೆ.

ದತ್ತಮಾಲೆಯನ್ನು ನಾವೇಕೆ ಧರಿಸಬಾರದು, ಸಮಯ ಬಂದಾಗ ನಾನೂ ಸಹ ಧರಿಸುತ್ತೇನೆ ಕಾನೂನು ಬಾಹಿರವಲ್ಲ, ಸಂಸ್ಕೃತಿಯನ್ನು ಕಾಪಾಡಲು ಕಾನೂನಿನ ಚೌಕಟ್ಟಿನಲ್ಲಿ ಏನು ಬೇಕಾದರೂ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು.

ದತ್ತಮಾಲಾ ಧಾರಣೆಯನ್ನು ಯಾಕೆ ಮಾಡಬಾರದು ಎಂಬ ಹೆಚ್‌ಡಿಕೆ ಹೇಳಿಕೆಗೆ ಹರ್ಷ ವ್ಯಕ್ತಪಡಿಸಿರುವ ಹಿಂದು ಮುಖಂಡರು. ಬಜರಂಗದಳ, ವಿಶ್ವಹಿಂದು ಪರಿಷತ್‌ನಿಂದ ಹೆಚ್.ಡಿ.ಕೆಗೆ ಆಹ್ವಾನ ನೀಡುವ ಸಾಧ್ಯತೆಯಿದೆ.

ವಿಹೆಚ್​ಪಿ ಕಾರ್ಯಕರಣಿ ಸದಸ್ಯ ರಘು ಸಕಲೇಶಪುರ ಅವರು ಕುಮಾರಸ್ವಾಮಿಯವರು ದತ್ತಮಾಲಾಧಾರಣೆ ಮಾಡಲು ನಿರ್ಧರಿಸುವುದು ಸ್ವಾಗತಾರ್ಹ, ನಿಮ್ಮ ರಾಜಕೀಯ ಭವಿಷ್ಯ ಬದಲಾಗಲಿದ್ದು, ಇನ್ನಷ್ಟು ಶಕ್ತಿ ನೀಡಲಿ ಎಂದು ದತ್ತಾತ್ರೇಯ ಸ್ವಾಮಿಯಲ್ಲಿ ಬೇಡುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಡಿಸೆಂಬರ್ 17 ರಿಂದ 26ರವರೆಗೆ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನ ನಡೆಯಲಿದ್ದು, ಇದರಲ್ಲಿ ಪಾಲ್ಗೊಳುವಂತೆ ಬಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಸಂಘಟನೆಗಳು ಹೆಚ್​​ಡಿ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡುವ ಸಾಧ್ಯತೆಗಳಿವೆ. ಕುಮಾರಸ್ವಾಮಿ ಹೊಸ ಅವತಾರದಲ್ಲಿ ದತ್ತಮಾಲಾಧಾರಿಯಾಗಿ ಪಾಲ್ಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್, ವಿಎಚ್‌ಪಿ ಮತ್ತು ಬಜರಂಗದಳದ ಮೇಲೆ ವಿವಿಧ ವಿಷಯಗಳ ಮೇಲೆ ವಾಗ್ದಾಳಿ ನಡೆಸಿದ್ದು, ಅವರ ಕಾರ್ಯಕರ್ತರು ರಾಮ ಮಂದಿರದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದು, ಸೇಡು ತೀರಿಸಿಕೊಳ್ಳಲು ಅದಕ್ಕೆ ಕೊಡುಗೆ ನೀಡದವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದನ್ನು ಸ್ಮರಿಸಬಹುದಾಗಿದೆ. ಏಪ್ರಿಲ್ 2023 ರಲ್ಲಿ, 'ಹಲಾಲ್ ಕಟ್' ವಿಷಯದ ಕುರಿತು, ಈ ಸಂಘಟನೆಗಳು ಸಮಾಜವನ್ನು ವಿಭಜಿಸುತ್ತಿವೆ ಎಂದು ಆರೋಪಿಸಿದ್ದರು.

ಸಮಾಜವನ್ನು ವಿಭಜಿಸುವ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ. ಜನರನ್ನು ವಿಭಜಿಸುವ ಇಂತಹ ಸಂಘಟನೆಗಳ ವಿರುದ್ಧ ನನ್ನ ನಿಲುವು ಅಚಲವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT