ರಮೇಶ್ ಜಾರಕಿಹೊಳಿ ಮನೆಯಲ್ಲಿ ಉಪಹಾರ ಸೇವನೆ ಮಾಡುತ್ತಿರುವ ಬಿವೈ ವಿಜಯೇಂದ್ರ. 
ರಾಜಕೀಯ

ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಇಂದು ಬೆಳಿಗ್ಗೆ ವಿಜಯೇಂದ್ರ ಅವರು ಭೇಟಿ ನೀಡಿದ್ದು, ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಅವರು, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಬಳಿಕ ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.

ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆನ್ನಲಾಗಿದೆ.

ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ ಅವರು, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ. ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುತ್ತೇನೆಂದು ಹೇಳಿದ್ದಾರೆಂದು ಎಂದು ಸಂತಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

SCROLL FOR NEXT