ರಮೇಶ್ ಜಾರಕಿಹೊಳಿ ಮನೆಯಲ್ಲಿ ಉಪಹಾರ ಸೇವನೆ ಮಾಡುತ್ತಿರುವ ಬಿವೈ ವಿಜಯೇಂದ್ರ. 
ರಾಜಕೀಯ

ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಯತ್ನ: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದ್ದು, ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಇಂದು ಬೆಳಿಗ್ಗೆ ವಿಜಯೇಂದ್ರ ಅವರು ಭೇಟಿ ನೀಡಿದ್ದು, ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಅವರು, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಬಳಿಕ ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.

ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅತೃಪ್ತಿಗೊಂಡಿದ್ದರು. ಹೀಗಾಗಿ ಅವರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆನ್ನಲಾಗಿದೆ.

ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ ಅವರು, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ನನ್ನ ಜವಾಬ್ದಾರಿ ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ. ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುತ್ತೇನೆಂದು ಹೇಳಿದ್ದಾರೆಂದು ಎಂದು ಸಂತಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!