ವಿ.ಸೋಮಣ್ಣ 
ರಾಜಕೀಯ

ಬಿಜೆಪಿಯಲ್ಲಿ 'ಸೋಮನಹಳ್ಳಿ ಮುದುಕಿ ಕಥೆ' ಆಗಿದೆ; ಡಿ. 6ರ ನಂತರ ಮಾತನಾಡುವೆ: ಸೋಮಣ್ಣ

ಡಿಸೆಂಬರ್ 6ರ ನಂತರ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಅರವಿಂದ್ ಲಿಂಬಾವಳಿ ಮಾತಿಗೆ ನನ್ನ ಸಮ್ಮತಿ ಇದೆ. ಪಕ್ಷದಲ್ಲಿ ಸೋಮನಹಳ್ಳಿ ಮುದುಕಿ ಕಥೆ ರೀತಿ ಆಗಿದೆ ಎಂದು ಹೇಳುವ ಮೂಲಕ ಅಸಮಾಧಾನ ಹೊರ ಹಾಕಿದರು.

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ವೈ ವಿಜಯೇಂದ್ರ ನೇಮಕದ ಬಳಿಕ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಡಿಸೆಂಬರ್ 6ರ ನಂತರ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಅರವಿಂದ್ ಲಿಂಬಾವಳಿ ಮಾತಿಗೆ ನನ್ನ ಸಮ್ಮತಿ ಇದೆ. ಪಕ್ಷದಲ್ಲಿ ಸೋಮನಹಳ್ಳಿ ಮುದುಕಿ ಕಥೆ ರೀತಿ ಆಗಿದೆ ಎಂದು ಹೇಳುವ ಮೂಲಕ ಅಸಮಾಧಾನ ಹೊರ ಹಾಕಿದರು. ಈ ನಡುವೆ ಅಸಮಾಧಾನಗೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಗೆ ವಿಜಯೇಂದ್ರ ಮುಂದಾಗಿದ್ದಾರೆ. ಶಾಸಕಾಂಗ ಸಭೆ ಆರಂಭಕ್ಕೂ ಮುನ್ನವೇ ಬಸನಗೌಡ ಪಾಟೀಲ್ ಯತ್ನಾಳ್ ಜೊತೆಯಲ್ಲಿ ರಮೇಶ್ ಜಾರಕಿಹೊಳಿ ಹೊರ ಬಂದಿದ್ದರು.

ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸೋಮಣ್ಣ ಮತ್ತಷ್ಟು ಅಸಮಧಾನಗೊಂಡಿದ್ದಾರೆ. ಹೀಗಾಗಿ ಸೋಮಣ್ಣ ಅವರು ಕಾಂಗ್ರೆಸ್​ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಇದಕ್ಕೆ ಸೋಮಣ್ಣ ಪ್ರತಿಕ್ರಿಯಿಸಿದ್ದು, ಡಿಸೆಂಬರ್​ 6ರ ಬಳಿಕ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮಣ್ಣ ಅವರ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ ಎಂದು ಪರೋಕ್ಷವಾಗಿ ಸ್ವಪಕ್ಷದ ನಾಯಕರ ವಿರುದ್ಧ ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಒಳ ಒಪ್ಪಂದವಾಗಿದೆ, ಯಾರು ಆತುರ ಪಡಬೇಡಿ ಎಂದು ಕಾರ್ಯಕರ್ತರಿಗೆ ಸೋಮಣ್ಣ ಕಿವಿಮಾತು ಹೇಳಿದ್ದಾರೆ.

ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು , ಯಡಿಯೂರಪ್ಪ ಅವರನ್ನು ಸಂಪರ್ಕಿಸಿಲ್ಲ. ಡಿಸೆಂಬರ್​ 6ರ ಬಳಿಕ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.

ಇದೀಗ ತಮ್ಮ ರಾಜಕೀಯ ವಿರೋಧಿ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಸೋಮಣ್ಣನವರ ಕಣ್ಣು ಮತ್ತಷ್ಟು ಕೆಂಪಾಗಿಸಿದೆ. ಸೋಮಣ್ಣ ಸಹ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿದರೆ ನಿಭಾಯಿಸುವೆ ಎಂದು ಬಹಿರಂಗವಾಗಿಯೇ ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ವಿಜಯೇಂದ್ರಗೆ ಮಣೆ ಹಾಕಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT