ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಿಟಿ ರವಿ 
ರಾಜಕೀಯ

ಭ್ರಷ್ಟಾಚಾರದಲ್ಲಿ ಡಿಕೆ ಶಿವಕುಮಾರ್ ತಪಿತಸ್ಥ: ಪರೋಕ್ಷವಾಗಿ ಒಪ್ಪಿಕೊಂಡ ಸಿದ್ದು ಸರ್ಕಾರ- ಸಿಟಿ ರವಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು:  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಶುಕ್ರವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರಜಾಪ್ರಭುತ್ವ ಮತ್ತು ನೈತಿಕತೆಯ ಬಗ್ಗೆ ಯಾವಾಗಲೂ ಉಪನ್ಯಾಸ ನೀಡುವ ಕಾಂಗ್ರೆಸ್ ತನಿಖಾ ಸಂಸ್ಥೆಗಳಿಗೆ ತಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ. 

ಭ್ರಷ್ಟ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯಲ್ಲಿ ತಪ್ಪಿತಸ್ಥರು ಎಂಬುದು ಬಹಳ ಸ್ಪಷ್ಟವಾಗಿದೆ. ಡಿಕೆ ಶಿವಕುಮಾರ್ ದೋಷಿ ಎಂದು ಸಾಬೀತಾದರೆ ಅವರು ಜೈಲಿಗೆ ಹೋಗುವುದು ಮಾತ್ರವಲ್ಲದೆ ಭ್ರಷ್ಟಾಚಾರದ ಹಣ ಪಡೆದ ಅವರ ಯಜಮಾನರು ಕೂಡ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಸಿಬಿಐ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಮಾಡದಂತೆ ತಡೆಯಲು ಹೊರಟಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT