ಕಾಂಗ್ರೆಸ್​ ಶಾಸಕ ಬಾಲಕೃಷ್ಣ 
ರಾಜಕೀಯ

ಬಿಜೆಪಿಯವರು ಬ್ರಿಟಿಷರು ಇದ್ದಂತೆ, ಚುನಾವಣೆಗಾಗಿ ಅಮಾಯಕ ಸೈನಿಕರ ಬಲಿಕೊಟ್ಟಿದ್ದರು: ಕಾಂಗ್ರೆಸ್​ ಶಾಸಕ ಬಾಲಕೃಷ್ಣ

ಬಿಜೆಪಿಯವರು ಬ್ರಿಟಿಷ್ ನವರು ಇದ್ದಂತೆ. ಅಮಾಯಕ ಸೈನಿಕರನ್ನ ಬಲಿಕೊಟ್ಟಂತಹ ಕೀರ್ತಿ ಬಿಜೆಪಿಯದ್ದು ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್​ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರ: ಬಿಜೆಪಿಯವರು ಬ್ರಿಟಿಷ್ ನವರು ಇದ್ದಂತೆ. ಅಮಾಯಕ ಸೈನಿಕರನ್ನ ಬಲಿಕೊಟ್ಟಂತಹ ಕೀರ್ತಿ ಬಿಜೆಪಿಯದ್ದು ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್​ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ‌ ಮಾತನಾಡಿರುವ ಅವರು, ಬಿಜೆಪಿಯವರು ಬ್ರಿಟಿಷರು ಇದ್ದಂತೆ, ಯಾರು ಪ್ರಬಲವಾಗಿರುತ್ತಾರೆ ಅವರ ಮಧ್ಯೆ ಗುಂಪು ಕಟ್ಟಿ ಎತ್ತಿಕಟ್ಟಿ ಒಡೆದಾಳುವ ನೀತಿ ಅನುಸರಿಸುತ್ತಾರೆ. ದೇಶದಲ್ಲಿ ಅಮಾಯಕ ಸೈನಿಕರನ್ನು ಬಲಿ ಕೊಟ್ಟಂತಹ ಕೀರ್ತಿ ಮೋದಿ ಸರಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

ದೇಶ ಆಳುವ ವ್ಯಕ್ತಿಗೆ ನಮ್ಮ ಸೈನಿಕರಿಗೆ ತೊಂದರೆ ಇದೆ ಎಂದು ಅವರ ಸರಕಾರಕ್ಕೆ ಹೇಳಲು ಸಾಧ್ಯವಿಲ್ಲ ಎನ್ನುವುದಾದರೆ ಹೇಗೆ?. ಬಲಿದಾನವಾಗಿದ್ದು ಸೈನಿಕರು, ಅಧಿಕಾರ ಬಂದಿದ್ದು ಮೋದಿಗೆ. ಈ ಬಗ್ಗೆ ಜನತೆ ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಕುಮಾರಸ್ವಾಮಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕುಮಾರಣ್ಣ ಮಾತೆತ್ತಿದ್ರೆ ನಾವು ಜಾತ್ಯಾತೀತ ಅಂತಾರೆ. ಆದರೆ, ದೇವೇಗೌಡರು ಸಾಯುವ ಕಾಲದಲ್ಲಿ ಕೋಮುವಾದಿ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್‍ಪಿಗೆ ಬಂದ ಗತಿ, ಕರ್ನಾಟಕದಲ್ಲಿ ಜೆಡಿಎಸ್'ಗೆ ಬರಲಿದೆ. ಆ ರೀತಿ ಜೆಡಿಎಸ್ ಪಕ್ಷವನ್ನ ಬಿಜೆಪಿಯವರು ಮಾಡದಿದ್ದರೆ, ನಾನು ನನ್ನ ಹೆಸರು ಬದಲಾಯಿಸಿಕೊಳ್ತೀನಿ. ಜೆಡಿಎಸ್ ಎಚ್ಚೆತ್ತುಕೊಳ್ಳದಿದ್ದರೆ ಸಂಪೂರ್ಣ ಅಸ್ಥಿತ್ವವೇ ಮುಗಿಯುತ್ತೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

1st Test: ಇತಿಹಾಸ ಬರೆದ Jasprit Bumrah, ಕನ್ನಡಿಗ Javagal Srinath ಹಳೇ ದಾಖಲೆ ಕೊನೆಗೂ ಪತನ!

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies, ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

SCROLL FOR NEXT