ಬಿಜೆಪಿ ಮಾಡಿರುವ ಫೋಸ್ಟ್ ನಲ್ಲಿ ಕಂಡುಬಂದ ಚಿತ್ರ 
ರಾಜಕೀಯ

ಚಿಂತೆ ಇಲ್ಲದವನಿಗೆ, ದಂಗೆಯಲ್ಲಿಯೂ ನಿದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಫೋಸ್ಟ್ ಮಾಡಿರುವ ಬಿಜೆಪಿ, ಚಿಂತೆ ಇಲ್ಲದವನಿಗೆ ದಂಗೆಯಲ್ಲಿಯೂ ನಿದ್ದೆ. ಕರ್ನಾಟಕ ಓಲೈಕೆ ರಾಜಕಾರಣದ ಪರಾಕಷ್ಟೆಯಲ್ಲಿ ದಹಿದಹಿಸುತ್ತಿದೆ ಎಂದು ಕಿಡಿಕಾರಿದೆ. 

ಸಿಎಂ, ಡಿಸಿಎಂ, ಮೂರು ಡಿಸಿಎಂ, ದಲಿತ ಸಿಎಂ, ಲಿಂಗಾಯಿತರು, ಬಿಕೆ ಹರಿಪ್ರಸಾದ್  ಒಳಜಗಳ, ಡಿಕೆ ಶಿವಕುಮಾರ್ ಜಾತಿವಾದಿ ಗುಂಪುಗಾರಿಕೆ, ವಿರೋಧಿಗಳ ಚಿಂತೆಯಲ್ಲಿ ಸಿದ್ದರಾಮಯ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ಲಕ್ಷಿಸಿದ್ದಾರೆ ಎಂಬರ್ಥದಲ್ಲಿ ಆರೋಪಿಸಿದೆ. 

ಮೂಲಭೂತವಾದಿಗಳನ್ನು ಬಿಡುಗಡೆಗೊಳಿಸುವ ಮುಖ್ಯಮಂತ್ರಿ, ಅಮಾಯಕರೆಂದು ಕ್ಲೀನ್ ಚಿಟ್ ಕೊಡುವ ಗೃಹ ಸಚಿವರು, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಹೇಳಿಕೆ ಕೊಡುವ ಜಿಲ್ಲಾ ಉಸ್ತುವಾರಿ ಸಚಿವರು ಇದ್ದಾಗ ಶಿವಮೊಗ್ಗದಲ್ಲಿ ಗಲಭೆ ನಡೆಯದೆ ಮತ್ತೇನು ತಾನೆ ನಡೆದೀತು ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT