ಬಿಎಸ್ ಯಡಿಯೂರಪ್ಪ 
ರಾಜಕೀಯ

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ   ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.  

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ   ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.  

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರು ಎಲ್ಲಾ 30 ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮತ್ತು ತಾಲೂಕು ನಾಯಕರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು. ಆ ಮೂಲಕ ಸುಮಾರು ಏಳು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ  ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಿದರು. 

ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿ 'ಆಂತರಿಕ ಅಘೋಷಿತ ಶೀತಲ ಸಮರ' ಇದೆ. ಅದೇ ಕಾರಣದಿಂದ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ  ಎಂದು ಮೂಲಗಳು ಹೇಳುತ್ತವೆ.  ಆದಾಗ್ಯೂ, ಬಿಎಸ್ ವೈ ಹೊರಗೆ ಹೋಗಿ ಪ್ರಚಾರ ಮಾಡಿದರೆ ಮಾತ್ರ ಬಿಜೆಪಿ ಉಳಿದು ಹೆಚ್ಚಿನ ಸ್ಥಾನಗಳನ್ನು ಮರುಪಡೆಯುತ್ತದೆ. ವಿಶೇಷವಾಗಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷ ಅನುಮತಿ ನೀಡದಿದ್ದರೆ ಏನು ಮಾಡಲು ಸಾಧ್ಯ ಎಂದು ಅವರ ಆಪ್ತರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

ಸತತ ಮೂರನೇ ವರ್ಷ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸಕ್ಕೆ ತೆರಳಲು ಪ್ರಯತ್ನಿಸುತ್ತಿದ್ದಾರೆ ಆದರೆ ಪಕ್ಷವು ಅವರನ್ನು ಕಾಯುವಂತೆ ಕೇಳಿದೆ. ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಪಕ್ಷವು ಹಲವು ಕೆಲಸಗಳಲ್ಲಿ ನಿರತವಾಗಿದೆ, ಯಡಿಯೂರಪ್ಪ ಅವರು ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. 

ಈ ಮಧ್ಯೆ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ಹೆಸರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದ್ದು, ಅದಾದ ನಂತರ ಯಡಿಯೂರಪ್ಪ  ತಮ್ಮ ಪ್ರವಾಸವನ್ನು ಪ್ರಾರಂಭಿಸಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ ಕೆಲವು ಭ್ರಷ್ಟ ವ್ಯಕ್ತಿಗಳೊಂದಿಗೆ ವಿಜಯೇಂದ್ರ ಅವರ ಸಂಪರ್ಕದ ವಿಷಯವನ್ನು ಎತ್ತುತ್ತಿರುವ ಯಡಿಯೂರಪ್ಪ ಅವರನ್ನು ವಿರೋಧಿಸುವ ಗುಂಪು ಅದಕ್ಕೆ ಅಡ್ಡಗಾಲು ಹಾಕುತ್ತಿದೆ ಎನ್ನಲಾಗುತ್ತಿದೆ.

ಯಡಿಯೂರಪ್ಪ ಅವರ ಸಹಾಯಕರಲ್ಲಿ ಒಬ್ಬರಾಗಿದ್ದ ಉಮೇಶ್ ಮೇಲೆ ಇಡಿ ದಾಳಿ ನಡೆಸಿದಾಗ ಇದು ಬಹಿರಂಗವಾಗಿದೆ. ಯಡಿಯೂರಪ್ಪನವರ ವಿರೋಧಿ ಗುಂಪು ಕೂಡ ಅವರ ಮತ್ತೊಬ್ಬ ಪುತ್ರ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿಸಲು ಪ್ರಯತ್ನಿಸುತ್ತಿದೆ. ಆದರೆ, ವಿಜಯೇಂದ್ರಗೆ ಉನ್ನತ ಹುದ್ದೆ ಸಿಕ್ಕರೆ ಸಂತಸ ತರಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.ಒಮ್ಮೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ 2019 ರಲ್ಲಿ ಮಾಡಿದಂತೆ ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರ ಕೈಗೊಳ್ಳುವುದು ಯಡಿಯೂರಪ್ಪ ಅವರ ಕರ್ತವ್ಯ ಎಂದು ಪಕ್ಷದ ಮೂಲಗಳು ಸೂಚಿಸಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!