ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌ 
ರಾಜಕೀಯ

ಕಾಂಗ್ರೆಸ್‌ ನಲ್ಲಿ ಲಿಂಗಾಯತ ಕಡೆಗಣನೆ ಆರೋಪ: ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ರಾಥೋಡ್ ಅಸಮಾಧಾನ

ಲಿಂಗಾಯತ ನಾಯಕರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಕಾಂಗ್ರೆಸ್‌ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದ್ದು, ಈ ಬಗ್ಗೆ ಹಲವು ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಬೆಂಗಳೂರು: ಲಿಂಗಾಯತ ನಾಯಕರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಕಾಂಗ್ರೆಸ್‌ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದ್ದು, ಈ ಬಗ್ಗೆ ಹಲವು ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಶಾಮನೂರು ಶಿವಶಂಕರಪ್ಪ ಆರೋಪ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌ ಅವರು, ತಮ್ಮ ಆಯಸ್ಸಿನ ಮುಕ್ಕಾಲು ಭಾಗವನ್ನು ಕಾಂಗ್ರೆಸ್‌ ಪಕ್ಷದಲ್ಲೇ ಕಳೆದಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಲಿಂಗಾಯತ ಜಾತಿಗೆ ಸೀಮಿತವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ನ್ಯಾಯ ಕಾಂಗ್ರೆಸ್‌ ಪಕ್ಷದ ಜೀವಾಳ ಎಂಬುದನ್ನು ಶಾಮನೂರು ಅವರಿಗೆ ತಿಳಿಹೇಳುವ ಅಗತ್ಯವಿಲ್ಲ. ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗಗಳ ಜನರ ಕೊಡುಗೆಯನ್ನು ಮರೆತು ತಮ್ಮ ಸಮುದಾಯದವರಿಗೆ ಸೀಮಿತವಾಗಿ ಮಾತನಾಡಿರುವುದು ನೋವಿನ ಸಂಗತಿ ಎಂದು ತಿಳಿಸಿದ್ದಾರೆ.

ಸಂಪುಟದಲ್ಲಿ ಏಳು ಮಂದಿ ಲಿಂಗಾಯತರಿಗೆ ಅವಕಾಶ ಸಿಕ್ಕಿದೆ. ಇಬ್ಬರು ಮುಸ್ಲಿಮರಿಗೆ ಮಾತ್ರ ಸಚಿವ ಸ್ಥಾನ ದೊರಕಿದೆ. ಲಂಬಾಣಿ, ಉಪ್ಪಾರ, ಬಲಿಜಿಗ, ಯಾದವ ಸಮುದಾಯಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಈ ಎಲ್ಲ ಸಮುದಾಯದವರೂ ಶಿಸ್ತು ಮೀರದೆ ಬೇಡಿಕೆ ಮಂಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪಕ್ಷದ ಧೋರಣೆ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ಮಾತನಾಡಬಾರದು ಎಂದು ಆಗ್ರಹಿಸಿದ್ದಾರೆ.

ನೀವು ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದಕ್ಕೆ ಒಂದೇ ಸಮುದಾಯ ಕಾರಣವಲ್ಲ. ಎಲ್ಲ ಸಮುದಾಯಗಳ ಬೆಂಬಲದಿಂದ ಅದು ಸಾಧ್ಯವಾಗಿದೆ. ಹೀಗಾಗಿ ಎಲ್ಲ ಸಮುದಾಯಗಳ ಪರವಾಗಿ ಮಾತನಾಡಬೇಕಿತ್ತು. ಒಂದು ಸಮುದಾಯದ ಬೆರಳೆಣಿಕೆಯಷ್ಟು ಅಧಿಕಾರಿಗಳ ಪರ ಮಾತನಾಡಬಾರದಿತ್ತು’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!