ಜೆಡಿಎಸ್ ಮುಖಂಡರ ಸಭೆಯಲ್ಲಿ ಕುಮಾರಸ್ವಾಮಿ 
ರಾಜಕೀಯ

ಜಾತಿ ಗಣತಿ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಎಚ್ ಡಿಕೆ!

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ  ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ರಾಮನಗರ: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ  ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಬಿಡದಿಯ ಕೇತಗಾನಹಳ್ಳಿಯ ಭಾನುವಾರ ನಡೆದ ರಾಮನಗರ ಜಿಲ್ಲೆಯ ಜೆಡಿಎಸ್ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜಾತಿ ಗಣತಿ ವರದಿ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಕಾಂತರಾಜು ವರದಿಯನ್ನು  ಕುಮಾರಸ್ವಾಮಿ ಒಪ್ಪಲಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಸದಸ್ಯ ಕಾರ್ಯದರ್ಶಿ ಸಹಿ ಇಲ್ಲದೆ ಆ ವರದಿಯನ್ನು ಸ್ವೀಕಾರ ಮಾಡುವುದು ಹೇಗೆ? ಎನ್ನುವ ಅರಿವು ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದರು.

ಸಮ್ಮಿಶ್ರ ಸರ್ಕಾರ ಸಂದರ್ಭದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಒಮ್ಮೆಯಾದರೂ ಕಾಂತರಾಜು ವರದಿ ಬಗ್ಗೆ ಸಿದ್ದರಾಮಯ್ಯ ಚರ್ಚೆ ಮಾಡಿಲ್ಲ.  14 ತಿಂಗಳಲ್ಲಿ ಯಾವತ್ತಾದ್ರು ಈ ಬಗ್ಗೆ ಮಾತಾಡುತ್ತಿದ್ರಾ? ಜಾತಿಗಣತಿ ಮುಖ್ಯವಲ್ಲ, ಎಲ್ಲ ಜಾತಿಯಲ್ಲಿರುವ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಿಡಿಕಾರಿದರು.

ಜಾತ್ಯತೀತ ಎನ್ನುವ ಕಾಂಗ್ರೆಸ್ ನವರು ಜಾತಿ ಗಣತಿ ವರದಿಯಿಂದ ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಲು ಹೊರಟಿದ್ದಾರೆ.ಇದರಿಂದ ಏನು ಸಾಧನೆ ಮಾಡುತ್ತಾರೆ? ಸಮಾಜ ಹೊಡೆಯಲು ಮಾಡುತ್ತಾರೋ? ಸಮಾಜದಲ್ಲಿ ವಿಶ್ವಾಸಕ್ಕೆ ಧಕ್ಕೆ ತರಲು ಮಾಡುತ್ತಾರೋ ? ಒಗ್ಗಟ್ಟು ತರಲು ಮಾಡುತ್ತೀರೋ ಮೊದಲು ಅದನ್ನ ತಿಳಿಸಿ ಎಂದು ವಾಗ್ದಾಳಿ ನಡೆಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ