ಪ್ರಹ್ಲಾದ್ ಜೋಶಿ 
ರಾಜಕೀಯ

ಪಂಚರಾಜ್ಯಗಳ ಚುನಾವಣೆಗಾಗಿ ಕಾಂಗ್ರೆಸ್ ಕರ್ನಾಟಕದಲ್ಲಿ ಹಣ ಸಂಗ್ರಹಿಸುತ್ತಿದೆ: ಪ್ರಹ್ಲಾದ್ ಜೋಶಿ

ಐಟಿ ಅಧಿಕಾರಿಗಳು ದಾಳಿ ವೇಳೆ ಕೋಟ್ಯಂತರ ನಗದು ವಶಪಡಿಸಿಕೊಂಡ ಬೆನ್ನಲ್ಲೇ ಬಿಜೆಪಿ ನಾಯಕರು ಭ್ರಷ್ಟಾಚಾರ ವಿಚಾರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಹುಬ್ಬಳ್ಳಿ: ಐಟಿ ಅಧಿಕಾರಿಗಳು ದಾಳಿ ವೇಳೆ ಕೋಟ್ಯಂತರ ನಗದು ವಶಪಡಿಸಿಕೊಂಡ ಬೆನ್ನಲ್ಲೇ ಬಿಜೆಪಿ ನಾಯಕರು ಭ್ರಷ್ಟಾಚಾರ ವಿಚಾರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಂಚರಾಜ್ಯಗಳ ಚುನಾವಣೆಗಾಗಿ ಸಿದ್ದರಾಮಯ್ಯ ಸರ್ಕಾರ 1000 ಕೋಟಿ ರೂ.ಗಳನ್ನು ರಾಜ್ಯದಲ್ಲಿ ಸಂಗ್ರಹಿಸುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಅಕ್ರಮವಾಗಿ 1,000 ಕೋಟಿ ರೂ.ಗಳನ್ನು ಸಂಗ್ರಹಿಸಲು ಮುಂದಾಗಿದೆ ಎಂಬ ಮಾಹಿತಿ ನನ್ನ ಗಮನಕ್ಕೆ ಬಂದಿದೆ. ಐಟಿ ದಾಳಿಯ ವೇಳೆ ಸಿಕ್ಕ ಹಣವು ರಟ್ಟಿನ ಬಾಕ್ಸ್‌ಗಳಲ್ಲಿದ್ದವು. ಇದು ಸರ್ಕಾರದ ಉದ್ದೇಶವನ್ನು ತೋರಿಸಿವೆ. ವಶಪಡಿಸಿಕೊಂಡ ಹಣ ಕಾಂಗ್ರೆಸ್‌ಗೆ ಸೇರಿದ್ದಾಗಿದೆ.

ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಐಟಿ ದಾಳಿ ನಡೆಸಲಾಗಿದ್ದು, ಒಬ್ಬರ ಮನೆಯಲ್ಲಿ 42 ಕೋಟಿ ರೂ, ಮತ್ತೊಬ್ಬರ ಮನೆಯಲ್ಲಿ 45 ಕೋಟಿ ರೂ. ಪತ್ತೆಯಾಗಿದೆ. ಇದು ಕಾಂಗ್ರೆಸ್ ನಾಯಕರಿಗೆ ಸೇರಿದ ನಗದು ಹಣ ಎಂದು ಸಂತೋಷ್ ಎಂಬಾತ ಒಪ್ಪಿಕೊಂಡಿದ್ದಾನೆ. ಪತ್ತೆಯಾದ ಹಣವನ್ನು ಕಮಿಷನ್ ಮೂಲಕ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಸಮಾನಾರ್ಥಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ

ಸ್ವತಂತ್ರವಾಗಿ ಸ್ಪರ್ಧೆಗಿಳಿದರೂ ಗೆಲ್ಲಬಲ್ಲೆ, BJPಗೇಕೆ ಸೇರಲಿ..?: ಮಾಜಿ ಸಚಿವ ಕೆ.ಎನ್.ರಾಜಣ್ಣ

'ದಕ್ಷಿಣ ಕನ್ನಡದಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ: ನಮ್ಮ ಬಳಿ ಜನಬೆಂಬಲವೂ ಇಲ್ಲ, ರಾಜಣ್ಣ ಅವರಷ್ಟೂ ತಿಳುವಳಿಕೆಯೂ ಇಲ್ಲ'

ಜಕ್ಕೂರು ಏರೋಡ್ರೋಂ ವಿಸ್ತರಣೆ-ಸ್ಥಳ ಬಳಕೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

SCROLL FOR NEXT