ಜಗದೀಶ್ ಶೆಟ್ಟರ್ 
ರಾಜಕೀಯ

ರಮೇಶ್ ಜಾರಕಿಹೊಳಿ- ಜಗದೀಶ್ ಶೆಟ್ಟರ್ ಭೇಟಿ: ವದಂತಿಗಳಿಗೆ ಮಾಜಿ ಸಿಎಂ ಸ್ಪಷ್ಟನೆ

ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆ ಭರ್ಜರಿ ಪಕ್ಷ ಸಂಘಟನೆ ನಡೆಸಿರುವ ಜಗದೀಶ್‌ ಶೆಟ್ಟರ್‌ ಅವರನ್ನ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. 

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗ ಜಗದೀಶ್‌ ಶೆಟ್ಟರ್‌ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.

ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿ ಲೋಕಸಭಾ ಚುನಾವಣೆ ಭರ್ಜರಿ ಪಕ್ಷ ಸಂಘಟನೆ ನಡೆಸಿರುವ ಜಗದೀಶ್‌ ಶೆಟ್ಟರ್‌ ಅವರನ್ನ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ಮಾಡಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮನ್ನು ಭೇಟಿಯಾಗಿರುವ ಬಗ್ಗೆ ಕಾಂಗ್ರೆಸ್‌ ನಾಯಕ ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್‌, ಇತ್ತೀಚೆಗೆ ಬಹಳ ಜನರು ಭೇಟಿಯಾಗಿದ್ದಾರೆ. ರಮೇಶ್ ಜಾರಕಿಹೊಳಿ ಸಹ ಭೇಟಿಯಾಗಿದ್ದಾರೆ. ಆದರೆ ಇವತ್ತು ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಶೆಟ್ಟರ್ ಅವರನ್ನು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಂಗಳವಾರ ಭೇಟಿಯಾಗಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಶೆಟ್ಟರ್, ‘ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ ಎಂದು ಯಾರು ಹೇಳಿದ್ದು’ ಎಂದು ಮರುಪ್ರಶ್ನೆ ಹಾಕಿದರು. ‘ಈ ಹಿಂದೆ ಹಲವು ಬಾರಿ ರಮೇಶ ಜಾರಕಿಹೊಳಿ ಬಾರಿ ಭೇಟಿ ಆಗಿದ್ದಾರೆ. ಆದರೆ, ಇವತ್ತು (ಮಂಗಳವಾರ) ಭೇಟಿಯಾಗಿಲ್ಲ. ಅಲ್ಲದೆ, ರಮೇಶ ಜಾರಕಿಹೊಳಿ ಜತೆ ಎಂದೂ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಎರಡು ತಿಂಗಳಲ್ಲಿ ಬೇರೆ ಬೇರೆ ಸಂದರ್ಭದಲ್ಲಿ ಭೇಟಿಯಾಗಿದ್ದಾರೆ. ಬಂದವರಿಗೆ ಬೇಡ ಅಂತ ಹೇಳಲು ಆಗಲ್ಲ, ಬೇರೆ ಕಡೆ ಹೋದಾಗ ಹಳೆ ಸಂಬಂಧ ಇರುವುದರಿಂದ ಭೇಟಿಯಾಗಿರುತ್ತೇನೆ. ಅವರ ಬಳಿ ರಾಜಕೀಯವಾಗಿ ನಾನು ಚರ್ಚೆ ಮಾಡಿಲ್ಲ, ಅವರು ಸಹ ಆ ಪ್ರಯತ್ನ ಮಾಡಿಲ್ಲ.ಇದು ಸಹಜ ಭೇಟಿ ಅಷ್ಟೇ ಎಂದು ತಿಳಿಸಿದರು.

ಕಾಂಗ್ರೆಸ್ ಗೆ ಬಂದಾಗ ಬಿಜೆಪಿಗೆ ವಾಪಸ್ ಹೋಗಬಾರದು ಎಂಬ ನಿರ್ಧಾದಿಂದಲೇ ಬಂದಿದ್ದೇನೆ. ನನ್ನನ್ನು ಯಾರು ಕಾಂಗ್ರೆಸ್ ನಿಂದ ಬಿಜೆಪಿ ಬನ್ನಿ ಅಂತ ಯಾರು ಹೇಳಿಲ್ಲ ಎಂದು ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದರು. ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್​ಗೆ ಸೇರ್ಪಡೆ ಆಗಲಿದ್ದಾರೆ’ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ‘ನನ್ನನ್ನು ಭೇಟಿ ಮಾಡಿದವರ ಮಾಹಿತಿಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ನೀಡಿದ್ದೇನೆ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT