ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ 
ರಾಜಕೀಯ

ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮಾಜಿ  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ  ಡಿ.ಟಿ.ಶ್ರೀನಿವಾಸ್‌ ಹಾಗೂ  ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ

ಬೆಂಗಳೂರು: ಬಿಜೆಪಿ ಮಾಜಿ  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ  ಡಿ.ಟಿ.ಶ್ರೀನಿವಾಸ್‌ ಹಾಗೂ  ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪೂರ್ಣಿಮಾ ಹಾಗೂ ಶ್ರೀನಿವಾಸ್ ಮೀನಿಗೆ ಗಾಳ ಹಾಕ್ತಿದ್ದೆ, ಆದರೆ ಕಚ್ತಾ ಇರಲಿಲ್ಲ. ಈಗ ಅವರೊಟ್ಟಿಗೆ ಅಪಾರ ಸಂಖ್ಯೆಯಲ್ಲಿ ಜನರು ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ. ನೊಂದ ಜನರಿಗೆ ರಕ್ಷಣೆ‌ ಕೊಡುವ ಸಂಕಲ್ಪ ಮಾಡಿದ್ದೇವೆ.‌  ಐದು ಗ್ಯಾರಂಟಿ ಅನುಷ್ಠಾನಕ್ಕೆ ತಂದಿದ್ದೇವೆ. ಕೊಟ್ಟ ಮಾತಿನಂತೆ ಈವರೆಗೆ ನಾಲ್ಕು ಜಾರಿಗೆ ತಂದಿದ್ದೇವೆ. ಕರ್ನಾಟಕ ಮಾದರಿ ಎಂದು ದೇಶಕ್ಕೆ ತೋರಿಸಿದ್ದೇವೆ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಗೊಲ್ಲ ಸಮುದಾಯಕ್ಕೆ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ: ಕಾಂಗ್ರೆಸ್ ಸೇರಲು ಪೂರ್ಣಿಮಾ ಶ್ರೀನಿವಾಸ್ ಸಜ್ಜು!
ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ,ಕಹಿ ಘಟನೆಗಳಿಂದ ಕಾಂಗ್ರೆಸ್ ಪಕ್ಷವನ್ನು ನನ್ನ ತಂದೆ ತೊರೆದಿದ್ದರು. ಎಲ್ಲರ ಅಪೇಕ್ಷೆ ಮೇರೆಗೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ‌ ಸೇರ್ಪಡೆ ಆಗ್ತಿದ್ದೇವೆ. ಹಿಂದುಳಿದ ವರ್ಗಕ್ಕೆ ರಾಜಕೀಯ ಪ್ರಾತಿನಿಧ್ಯ ಬೇಕು. ಸಿದ್ದಾಂತವನ್ನು ಒಪ್ಪಿನೇ ಕಾಂಗ್ರೆಸ್ ಗೆ ಬಂದಿದ್ದು  ಮತ್ತೊಂದು ಪಯಣ ಶುರುವಾಗಿದೆ ಎಂದು ತಿಳಿಸಿದರು.

ಕಳೆದ 2018ರಲ್ಲಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರು ಚಿತ್ರದುರ್ಗ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗಿದ್ದರು. ಅದರಲ್ಲೂ ಕಾಂಗ್ರೆಸ್‍ನ ಭದ್ರಕೋಟೆ ಎಂದೇ ಹೆಸರಾಗಿದ್ದ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT