ಪ್ರಜ್ವಲ್ ರೇವಣ್ಣ 
ರಾಜಕೀಯ

ಕಾಂಗ್ರೆಸ್‌ನಲ್ಲಿ ಯಾರ್ಯಾರು ಎಲ್ಲೆಲ್ಲಿ ನಿಂತಿದ್ರು ಮೊದಲು ಚರ್ಚೆ ಮಾಡಿ; ದೇವೇಗೌಡರಿಗೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ: ಪ್ರಜ್ವಲ್‌ ರೇವಣ್ಣ

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬದಲಿಗೆ ಜೆಡಿಎಸ್ ವರಿಷ್ಠಎಚ್ ಡಿ ದೇವೇಗೌಡ ಸ್ಪರ್ಧಿಸಬೇಕು ಎಂಬ ಸ್ವಪಕ್ಷದ ಶಾಸಕ ಎ.ಮಂಜು ಅವರ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬದಲಿಗೆ ಜೆಡಿಎಸ್ ವರಿಷ್ಠಎಚ್ ಡಿ ದೇವೇಗೌಡ ಸ್ಪರ್ಧಿಸಬೇಕು ಎಂಬ ಸ್ವಪಕ್ಷದ ಶಾಸಕ ಎ.ಮಂಜು ಅವರ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್, ‘ಹಾಸನ ಲೋಕಸಭಾ ಕ್ಷೇತ್ರದಿಂದ ಎಚ್‌.ಡಿ.ದೇವೇಗೌಡರು ಸ್ಪರ್ಧೆ ಮಾಡುವುದಾದರೆ, ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ.ಅಧಿಕಾರ ಯಾರಿಗೂ ಶಾಶ್ವತವಲ್ಲ, ದೇವೇಗೌಡರು ಹಾಸನದಿಂದ ಸ್ಪರ್ಧಿಸಿದರೆ ಸಂತಸದಿಂದ ಸ್ವಾಗತಿಸುತ್ತೇನೆ’ ಎಂದು ಹೇಳಿದರು.

ಎಚ್​​ಡಿ ಕುಮಾರಸ್ವಾಮಿ ಅವರು ರಾಮನಗರದವರಲ್ಲ, ಹೊಳೆನರಸೀಪುರದವರೆಂಬ ಡಿಕೆ ಶಿವಕುಮಾರ್​​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರಜ್ವಲ್, ನಮ್ಮ ಬಗ್ಗೆ ಮಾತಾಡುವ ಮುನ್ನ ಕಾಂಗ್ರೆಸ್‌ನಲ್ಲಿ ಯಾರು ಯಾರು ಎಲ್ಲೆಲ್ಲಿ ನಿಂತಿದ್ದರು ಅನ್ನೋದನ್ನ ಮೊದಲು ಚರ್ಚೆ ಮಾಡಿ ನಮ್ಮ ಬಗ್ಗೆ ಮಾತಾಡಿ ಎಂದು ತಿರುಗೇಟು ನೀಡಿದರು.

ನಮ್ಮ ಬಗ್ಗೆ ಮಾತಾಡುವ ಮುನ್ನ ಕಾಂಗ್ರೆಸ್‌ನಲ್ಲಿ ಯಾರು ಯಾರು ಎಲ್ಲೆಲ್ಲಿ ನಿಂತಿದ್ದರು ಅನ್ನೋದನ್ನ ಮೊದಲು ಚರ್ಚೆ ಮಾಡಿ ನಮ್ಮ ಬಗ್ಗೆ ಮಾತಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಸದ ಪ್ರಜ್ವಲ್‌ ರೇವಣ್ಣ ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ರಾಮನಗರದವರಲ್ಲ, ಹೊಳೆನರಸೀಪುರದವರೆಂದು ಡಿಕೆ ಶಿವಕುಮಾರ್​​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು. ಹೆಚ್​ಡಿ ದೇವೇಗೌಡ ಹಾಸನದಿಂದ ಹೋಗಿ ದೆಹಲಿ ಆಳಿದರು, ಅದನ್ನು ತಪ್ಪು ಅಂತಾರಾ. ಪ್ರಧಾನಿ ಮೋದಿ ಗುಜರಾತ್‌ನಿಂದ ಬಂದಿರುವವರು, ವಾರಣಾಸಿಯಲ್ಲಿ ಸ್ಪರ್ಧಿಸಿಲ್ವಾ? ಪ್ರಜಾಪ್ರಭುತ್ವದಲ್ಲಿ ಎಲ್ಲಾದ್ರೂ ಸ್ಪರ್ಧಿಸಿ ಗೆಲ್ಲಬಹುದು ಅಥವಾ ಸೋಲಬಹುದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT