ಬೇಳೂರು ಗೋಪಾಲಕೃಷ್ಣ 
ರಾಜಕೀಯ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್'ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಡಿಮ್ಯಾಂಡ್!

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯಾಗಬಲ್ಲೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶನಿವಾರ ಹೇಳಿದರು.

ಬೆಂಗಳೂರು: ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯಾಗಬಲ್ಲೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶನಿವಾರ ಹೇಳಿದರು.

ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ. ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ. ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು ಹೇಳಿದರು.

ಗೃಹ ಸಚಿವ ಡಾ. ಜಿ ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿ, ಊಟಕ್ಕೆ ಕರೆದರೆ ಅದು ಬಣ ರಾಜಕಾರಣ ಆಗಲ್ಲ. ಸಿಎಂ, ಡಿಕೆಶಿ ಇಬ್ಬರು ನಾಯಕತ್ವದಲ್ಲಿ ಸರ್ಕಾರ ನಡೀತಿದೆ. ಬಣ ರಾಜಕಾರಣ ಇಲ್ಲ. ಈ ಕುಮಾರಸ್ವಾಮಿ ಮಧ್ಯದಲ್ಲಿ ಸ್ವಲ್ಪ ಕೈ ಆಡಿಸ್ತಿದ್ದಾರೆ. ಕುಮಾರಸ್ವಾಮಿ ಈಗ ಸ್ವಲ್ಪ ಚಿಗುರಿಕೊಂಡಿದ್ದಾರೆ. ಮೋದಿಯವರನ್ನು ಭೇಟಿ ಮಾಡಿ ಬಂದ ನಂತರ ಕುಮಾರಸ್ವಾಮಿ ಚಿಗುರಿಕೊಂಡಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಕಾಂಗ್ರೆಸ್. ಡಿಕೆಶಿ ಅವರಿಂದ ಕುಮಾರಸ್ವಾಮಿ ಸಿಎಂ ಆದರು. ಡಿಕೆಶಿ ಏನು ಅನ್ಯಾಯ ಮಾಡಿದ್ದಾರೆ ಅವರಿಗೆ? ಅವರ ತಾಲ್ಲೂಕನ್ನ ಬೆಂಗಳೂರಿಗೆ ಸೇರಿಸಿದರೆ ಎಡಿಕೆಗೆ ಏನು ಸಮಸ್ಯೆ? ಅವರ ತಾಲ್ಲೂಕನ್ನ ಅಭಿವೃದ್ಧಿ ಮಾಡ್ತಿದ್ದಾರೆ ಡಿಕೆಶಿ ಕನಕಪುರ ಜಿಲ್ಲೆ ಮಾಡಲಿ ಬಿಡಿ ಎಂದರು.

ಶಿವಮೊಗ್ಗದಲ್ಲಿ ಯಡಿಯೂರಪ್ಪ ಯಾಕೆ ಏರ್‌ಪೋರ್ಟ್ ಮಾಡಿದರು? ಶಿವಮೊಗ್ಗದಲ್ಲಿ ಯಡಿಯೂರಪ್ಪ ಜಮೀನು ಇದೆ ಅದಕ್ಕಾಗಿ ಏರ್‌ಪೋರ್ಟ್ ಮಾಡಿದರು. ಕನಕಪುರದಲ್ಲೂ ಡಿಕೆಶಿ ಸೇರಿ ಹಲವರ ಜಮೀನು ಇದೆ. ಜನರ ಜಮೀನೂ ಇದೆ. ಕನಕಪುರ ಅಭಿವೃದ್ಧಿ ಮಾಡಿದರೆ ಇವರಿಗೇನು ಸಮಸ್ಯೆ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT