ಬೇಳೂರು ಗೋಪಾಲಕೃಷ್ಣ 
ರಾಜಕೀಯ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್'ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಡಿಮ್ಯಾಂಡ್!

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯಾಗಬಲ್ಲೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶನಿವಾರ ಹೇಳಿದರು.

ಬೆಂಗಳೂರು: ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯಾಗಬಲ್ಲೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶನಿವಾರ ಹೇಳಿದರು.

ಶನಿವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಬಿಜೆಪಿಯವರ ದುರಾಡಳಿತ ಕೊನೆ ಮಾಡಲು ನಾನೇ ಸಮರ್ಥ ಅಭ್ಯರ್ಥಿ. ಹಾಗಾಗಿ, ಕ್ಷೇತ್ರಕ್ಕೆ ನಾನು ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿ ಆಗಬಲ್ಲೆ. ನನಗೆ ಟಿಕೆಟ್ ಕೊಟ್ಟರೆ ಗೆಲುವು ಸಾಧಿಸಲಿದ್ದೇನೆ ಎಂದು ಹೇಳಿದರು.

ಗೃಹ ಸಚಿವ ಡಾ. ಜಿ ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿ, ಊಟಕ್ಕೆ ಕರೆದರೆ ಅದು ಬಣ ರಾಜಕಾರಣ ಆಗಲ್ಲ. ಸಿಎಂ, ಡಿಕೆಶಿ ಇಬ್ಬರು ನಾಯಕತ್ವದಲ್ಲಿ ಸರ್ಕಾರ ನಡೀತಿದೆ. ಬಣ ರಾಜಕಾರಣ ಇಲ್ಲ. ಈ ಕುಮಾರಸ್ವಾಮಿ ಮಧ್ಯದಲ್ಲಿ ಸ್ವಲ್ಪ ಕೈ ಆಡಿಸ್ತಿದ್ದಾರೆ. ಕುಮಾರಸ್ವಾಮಿ ಈಗ ಸ್ವಲ್ಪ ಚಿಗುರಿಕೊಂಡಿದ್ದಾರೆ. ಮೋದಿಯವರನ್ನು ಭೇಟಿ ಮಾಡಿ ಬಂದ ನಂತರ ಕುಮಾರಸ್ವಾಮಿ ಚಿಗುರಿಕೊಂಡಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಕಾಂಗ್ರೆಸ್. ಡಿಕೆಶಿ ಅವರಿಂದ ಕುಮಾರಸ್ವಾಮಿ ಸಿಎಂ ಆದರು. ಡಿಕೆಶಿ ಏನು ಅನ್ಯಾಯ ಮಾಡಿದ್ದಾರೆ ಅವರಿಗೆ? ಅವರ ತಾಲ್ಲೂಕನ್ನ ಬೆಂಗಳೂರಿಗೆ ಸೇರಿಸಿದರೆ ಎಡಿಕೆಗೆ ಏನು ಸಮಸ್ಯೆ? ಅವರ ತಾಲ್ಲೂಕನ್ನ ಅಭಿವೃದ್ಧಿ ಮಾಡ್ತಿದ್ದಾರೆ ಡಿಕೆಶಿ ಕನಕಪುರ ಜಿಲ್ಲೆ ಮಾಡಲಿ ಬಿಡಿ ಎಂದರು.

ಶಿವಮೊಗ್ಗದಲ್ಲಿ ಯಡಿಯೂರಪ್ಪ ಯಾಕೆ ಏರ್‌ಪೋರ್ಟ್ ಮಾಡಿದರು? ಶಿವಮೊಗ್ಗದಲ್ಲಿ ಯಡಿಯೂರಪ್ಪ ಜಮೀನು ಇದೆ ಅದಕ್ಕಾಗಿ ಏರ್‌ಪೋರ್ಟ್ ಮಾಡಿದರು. ಕನಕಪುರದಲ್ಲೂ ಡಿಕೆಶಿ ಸೇರಿ ಹಲವರ ಜಮೀನು ಇದೆ. ಜನರ ಜಮೀನೂ ಇದೆ. ಕನಕಪುರ ಅಭಿವೃದ್ಧಿ ಮಾಡಿದರೆ ಇವರಿಗೇನು ಸಮಸ್ಯೆ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT