ಪ್ರಿಯಾಂಕ್ ಖರ್ಗೆ 
ರಾಜಕೀಯ

45 ಅಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಸಂತೋಷ್ ಗೆ ಖರ್ಗೆ ಪ್ರಶ್ನೆ

ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರೇ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ  ಹೇಳಿದ್ದಾರೆ.

ಬೆಂಗಳೂರು: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರೇ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ  ಹೇಳಿದ್ದಾರೆ.

40-45 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಬಿಎಲ್ ಸಂತೋಷ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,  ಮೊದಲು ಅವರ ಶಾಸಕರು, ಸಂಸದರನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ ಎಂದರು. ಅಲ್ಲದೆ, ಒಂದು ದಿನ ಅಲ್ಲ ಒಂದು ತಿಂಗಳ ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಸವಾಲು ಹಾಕಿದರು.

ಆರ್​ಎಸ್​ಎಸ್​​ನವರು ಯಾವುದೇ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಹೋಗಿ ಪಾಠ ಹೇಳುತ್ತಾರೆ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ.

ಸಂತೋಷ್ ಪಡೆ ಕಟ್ಟಲು ಲಿಂಗಾಯತರಿಗೆ ಟಿಕೆಟ್ ನೀಡಿಲ್ಲ. ಅದು ವಿಫಲವಾಯಿತು ಎಂದು ನಿಮ್ಮ ಮಾಜಿ ಶಾಸಕರು ಹೇಳುತ್ತಿದ್ದಾರೆ. ಅದಕ್ಕೆ ಮೊದಲು ಸಂತೋಷ್ ಉತ್ತರ ನೀಡಲಿ, ನಂತರ ಶಾಸಕರ ಬಗ್ಗೆ ಮಾತನಾಡಲಿ ಎಂದರು.

ಶಾಸಕರ ಅಸಮಾಧಾನದ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರು ಅಹವಾಲು ಸ್ವೀಕಾರ ಮಾಡಿದ್ದಾರೆ. ಹಂತ ಹಂತವಾಗಿ ಈಡೇರಿಸುತ್ತಾರೆ ಎಂಬ ವಿಶ್ವಾಸ ನೀಡಿದ್ದಾರೆ. ಎಲ್ಲರ ಸಹಕಾರ, ಸಹನೆ ಬೇಕಾಗುತ್ತದೆ. ಗ್ಯಾರಂಟಿಗಳು ಯೋಜನೆಗಲು ಎಲ್ಲರಿಗೂ ತಲುಪುತ್ತಿದೆ. ಈ ಬಾರಿ ಸ್ವಲ್ಪ ಕಷ್ಟ ಆಗಬಹುದು ಎಂದು ಸಿಎಂ ಹೇಳಿದ್ದಾರೆ. ಹಿಂದಿನ ಸರ್ಕಾರ ಸಾಲ ಮಾಡಿ ತುಪ್ಪ ತಿನ್ನುವ ಅಭ್ಯಾಸ ಮಾಡಿಕೊಂಡಿದ್ದರು. ಈಗ ಆರ್ಥಿಕವಾಗಿ ರಾಜ್ಯ ದಿವಾಳಿಯಾಗಿಲ್ಲ. ಪ್ರಗತಿಪರ ಹೆಜ್ಜೆ ಹಾಕುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT