ಕೆ.ಎಸ್ ಈಶ್ವರಪ್ಪ 
ರಾಜಕೀಯ

ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಪ್ರಕಾಶ್‌ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ

ಯಾವನ್ರೀ ಅವನು ಸ್ಟಾಲಿನ್‌? ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಅವನೊಬ್ಬ ಅಯೋಗ್ಯ, ಹುಚ್ಚ. ಸನಾತನ ಧರ್ಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ವಿಜಯಪುರ: ಯಾವನ್ರೀ ಅವನು ಸ್ಟಾಲಿನ್‌? ಉದಯನಿಧಿಗೂ ಸನಾತನ ಧರ್ಮಕ್ಕೂ ಏನು ಸಂಬಂಧ? ಅವನೊಬ್ಬ ಅಯೋಗ್ಯ, ಹುಚ್ಚ. ಸನಾತನ ಧರ್ಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್‌ ಹೇಳಿಕೆ ವಿಚಾರಕ್ಕೆ ವಿಜಯಪುರದಲ್ಲಿ ಮಾತನಾಡಿದ ಅವರು, ಈ‌ ಧರ್ಮದ ಬಗ್ಗೆ ಯಾರಾರು ಮಾತಾಡಿದಾರೋ? ಈ ಧರ್ಮವನ್ನು ಮುಟ್ಟಿದವನು ಯಾರಾದ್ರೂ ಉದ್ಧಾರ ಆಗಿದ್ದಾರಾ? ಉದಯನಿಧಿ ಸ್ಟಾಲಿನ್ ಹೇಳ್ತಾನೆ ಸನಾತನ ಧರ್ಮವನ್ನು ನಾಶ ಮಾಡ್ತಿನಿ ಅಂತಾ. ಅವರಪ್ಪ, ಅವರ ತಾತನ ಕಡೆಯಿಂದಲೇ ಆಗಿಲ್ಲ. ಧರ್ಮವನ್ನು ನಾಶ ಮಾಡಲು ಹೋದವರು ಯಾರೂ ಉಳಿದಿಲ್ಲ, ಇವನ್ಯಾವನು ಬಚ್ಚಾ ಎಂದು ಕಿಡಿಕಾರಿದ್ದಾರೆ.

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ತಂದೆ - ತಾಯಿಗೆ ಹುಟ್ಟಿದ್ದೇನೆ ಎಂಬ ನಟ ಪ್ರಕಾಶ್‌ ರಾಜ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಕಾಶ್‌ ರಾಜ್ ಅಯೋಗ್ಯ, ಅಪ್ಪ-ಅಮ್ಮಂಗೆ ಹುಟ್ಟಿದೀನಿ ಅಂತಾನೆ. ಅಪ್ಪ-ಅಮ್ಮಂಗೆ ಹುಟ್ಟಿದಾನೇ ಅನ್ನೋಕೆ ಗ್ಯಾರೆಂಟಿ‌ ಏನು? ನನಗೆ ಅವರ ಅಮ್ಮನ ಬಗ್ಗೆ ಗೌರವ ಇದೆ. ಅವರ ಅಪ್ಪ ಯಾರು ಎಂದು ಕೇಳಿದ್ದಾನಾ? ಆದ್ರೆ, ಇವರೇ ಅಪ್ಪ ಎಂದು ಅವರ ತಾಯಿ ಹೇಳಿದಾಗ ಈತನಿಗೆ ಅಪ್ಪ ಅನ್ನೋದು ಗೊತ್ತಾಗಿದೆ ತಾನೇ ಎಂದು ಹೇಳಿದರು.

ಪ್ರಪಂಚಕ್ಕೆ ಶಾಂತಿ, ಧರ್ಮವನ್ನು ಹೇಳಿದ್ದು ಭಾರತ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಅಂತಾ ಹೇಳಿದ್ದಾರೆ. ಮಾಡ್ತಾ ಇರೋದೆಲ್ಲಾ ಹಲಕಟ್ ಗಿರಿ. ಶಾಂತಿ ಕದಡಿಸೋದೆ ಅವರ ಕೆಲಸ. ಮುಸ್ಲಿಂರಿಗೆ ನೋವು ಮಾಡಿ ಅಂತಾ ಹೇಳಲ್ಲ. ಕುರಾನ್ ಬಗ್ಗೆ, ಮುಸ್ಲಿಮರು ಎಲ್ಲಿ, ಯಾವಾಗ ಹುಟ್ಟಿದ್ದು ಅಂತಾ ಪ್ರಶ್ನೆ ಕೇಳಲಿ ನೋಡೋಣ, ಅವರನ್ನು ಕೆಣಕಿ ನೋಡಲಿ ಇವರು. ಮಾತನಾಡಬೇಕಾದ್ರೆ ಮೈಮೇಲೆ ಜ್ಞಾನ ಇಟ್ಟುಕೊಂಡು ಮಾತನಾಡಬೇಕು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT