ಸುಕುಮಾರ ಶೆಟ್ಟಿ 
ರಾಜಕೀಯ

'ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದೇನೆ': ಮಾಜಿ ಶಾಸಕ ಬಿ ಎಂ ಸುಕುಮಾರ ಶೆಟ್ಟಿ 'ಕೈ' ಸೇರ್ಪಡೆ ಖಚಿತ

ಕಾಂಗ್ರೆಸ್ ನಿಂದ 2024ರ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ನಡೆಯಲಿದೆ, ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹದ ನಡುವೆ ಕರಾವಳಿಯ ಪ್ರಭಾವಿ ನಾಯಕ, ಬಿಜೆಪಿ ಮಾಜಿ ಶಾಸಕ ಬಿಎಂ ಸುಕುಮಾರ್ ಶೆಟ್ಟಿ (BM Sukumar Shetty) ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಪಕ್ಕಾ ಆಗಿದೆ. 

ಬೆಂಗಳೂರು: ಕಾಂಗ್ರೆಸ್ ನಿಂದ 2024ರ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ನಡೆಯಲಿದೆ, ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹದ ನಡುವೆ ಕರಾವಳಿಯ ಪ್ರಭಾವಿ ನಾಯಕ, ಬಿಜೆಪಿ ಮಾಜಿ ಶಾಸಕ ಬಿಎಂ ಸುಕುಮಾರ್ ಶೆಟ್ಟಿ (BM Sukumar Shetty) ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಪಕ್ಕಾ ಆಗಿದೆ. 

ಈ ಹಿಂದೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಚುನಾವಣೆಗೆ ನಿಂತು ಶಾಸಕರಾಗಿದ್ದ ಬಿಎಂ ಸುಕುಮಾರ್ ಶೆಟ್ಟಿ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿತ್ತು. ಈ ಹಿನ್ನೆಲೆ ಇದೇ ಅಸಮಾಧಾನದಿಂದ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಮಲ ತೊರೆದು ಕೈ ಹಿಡಿಯುವ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರೇ ದೃಢಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಕುಮಾರ್ ಶೆಟ್ಟಿ, ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಅಲೆ ಹೊರತುಪಡಿಸಿ ಬೇರೆಲ್ಲ ಕಡೆ ಬಿಜೆಪಿ ಹೆಸರು ಹಾಳುಮಾಡಿಕೊಂಡಿದೆ. ಡಿ ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ. ಈಗ ನಾನು ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೆಳೆಯುವವರನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT