ಜಗದೀಶ್ ಶೆಟ್ಟರ್ 
ರಾಜಕೀಯ

ಇಬ್ಬರು ದುರ್ಬಲರಿಂದ ಮೈತ್ರಿ: ಜೆಡಿಎಸ್-ಬಿಜೆಪಿ ಹೊಂದಾಣಿಕೆ ಕುರಿತು ಜಗದೀಶ್ ಶೆಟ್ಟರ್ ವ್ಯಂಗ್ಯ

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ .

ಹುಬ್ಬಳ್ಳಿ: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ ಎಂದು ಹೇಳುವ ವ್ಯಂಗ್ಯ ವಾಡಿದ್ದಾರೆ.

ಎರಡೂ ಪಕ್ಷಗಳ ನಡುವೆ ಪೈಪೋಟಿ ಇತ್ತು. ಈಗ ಸ್ವಯಂ ಅನುಕೂಲಕ್ಕೆ ಮೈತ್ರಿ ಮಾಡಿಕೊಳ್ಳುತ್ತಿವೆ. ಆ ಪಕ್ಷಗಳ ಮೇಲೆ ಜನರಿಗೆ ವಿಶ್ವಾಸ ಮತ್ತು ನಂಬಿಕೆ ಹೋಗಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್‌ ಬಲಗೊಂಡಿದೆ. ಅದಕ್ಕಾಗಿ ಹಲವು ನಾಯಕರು ಬರಲು ಸಿದ್ಧರಾಗಿದ್ದಾರೆ. ಯಾರೆಲ್ಲ ಸೇರ್ಪಡೆ ಆಗುವರು ಎಂಬುದನ್ನು ಈಗಲೇ ಹೇಳಲು ಆಗುವುದಿಲ್ಲ. ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇತರ ರಾಜ್ಯಗಳಲ್ಲೂ ಕಾಂಗ್ರೆಸ್‌ ಬಲಗೊಳ್ಳುತ್ತಿದೆ’ ಎಂದರು.

ಮೈತ್ರಿ ವಿಚಾರದಲ್ಲಿ ಬಿಜೆಪಿ ಯಾವಾಗಲೂ ದ್ವಂದ್ವ ನಿಲುವು ಅನುಸರಿಸುತ್ತೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ ಅಂತ ಆರೋಪ ಮಾಡಿದರು. ಒಂದೇ ತಿಂಗಳಲ್ಲಿ ಅವರನ್ನು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸೇರಿಸಿಕೊಂಡರು.

ರಾಜಕೀಯ ಪಕ್ಷಕ್ಕೆ ಗಟ್ಟಿ ನಿರ್ಧಾರಗಳು ಇರಬೇಕು. ಇವತ್ತು ಟೀಕೆ ಮಾಡೋದು, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಏನರ್ಥವಿದೆ. ಮೈತ್ರಿ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು. ಆದರೆ ಬಿಜೆಪಿಯವರು ಬಂದ ಪಕ್ಷಗಳನ್ನು ಸರಿಯಾಗಿ ನಡೆಸಿಕೊಳ್ಳಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT