ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಅಧಿಕಾರದಲ್ಲಿ ಉಳಿಯುವ ನೈತಿಕ ಹಕ್ಕನ್ನು ಕಾಂಗ್ರೆಸ್ ಕಳೆದುಕೊಂಡಿದೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

ನಿನ್ನೆಯಷ್ಟೇ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.

ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ರಾಜ್ಯದಾದ್ಯಂತ ಬಿಜೆಪಿ ನಾಯಕರು ಇದರ ವಿರುದ್ಧ ಹೋರಾಟ ನಡೆಸಲಿದ್ದಾರೆ. ಬಿಜೆಪಿಯ ಹೋರಾಟಕ್ಕೆ ರಾಜ್ಯದ ಜನತೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ರೈತರಿಗೆ ಸರ್ಕಾರ 3 ಗಂಟೆ ವಿದ್ಯುತ್ ನೀಡದ ಕಾರಣ ನೀರಾವರಿ ಪಂಪ್‌ಸೆಟ್‌ಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಎಲ್ಲಾ ನೀರಾವರಿ ಯೋಜನೆಗಳನ್ನು ನಿಲ್ಲಿಸಲಾಗಿದೆ. ರಾಜ್ಯದ ಸುಮಾರು 180 ತಾಲ್ಲೂಕುಗಳು ಬರ ಪರಿಸ್ಥಿತಿ ಎದುರಿಸುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಮೇವಿನ ಕೊರತೆ ಇದೆ. ಆದರೂ ಸರ್ಕಾರ ಬರ ಘೋಷಣೆ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಸರಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ವಂಚಿಸಿದ್ದು, ಯೋಜನೆಗಳಾದರೂ ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT