ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು 
ರಾಜಕೀಯ

ಹಿಂದುತ್ವದ ಬಗ್ಗೆ ಅವಹೇಳನಕಾರಿ ಮಾತು: ರಾಹುಲ್ ಗಾಂಧಿ ಕ್ಷಮೆಯಾಚಿಸಲಿ; ಬಿ.ಎಸ್ ಯಡಿಯೂರಪ್ಪ ಆಗ್ರಹ

ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ  ಆಗ್ರಹಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌  ನಾಯಕ ರಾಹುಲ್ ಗಾಂಧಿ ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ  ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರ್ಕಾರವು ಜನಪ್ರಿಯತೆ ಕಳೆದುಕೊಂಡಿದೆ.

ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರ್ಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಅಂತ ಸಭೆಯಲ್ಲಿ ಹೇಳಿದ್ದಾರೆ. ಸೆ.18ರಿಂದ ಕುರುಡುಮಲೆಯಿಂದ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಸಿಎಂ ಸದಾನಂದಗೌಡ, "ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ಜನವಿರೋಧಿಯಾದ ಇಂತಹ ಸರ್ಕಾರವನ್ನು ನಾನು ನೋಡಿಲ್ಲಎಂದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬರಗಾಲ, ಆಡಳಿತದಲ್ಲಿ ವೈಫಲ್ಯ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತ ವೈಖರಿ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಕೇವಲ 100 ದಿನಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಇದು ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ. ಈ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಸರ್ಕಾರವು ಎಸ್‌ಸಿ/ಎಸ್‌ಟಿ ಸಮುದಾಯಗಳ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಅವರಿಗೆ ಅನ್ಯಾಯ ಮಾಡಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT