ಶಿವರಾಜ್ ತಂಗಡಗಿ 
ರಾಜಕೀಯ

ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಟೆಂಡರ್ ಪ್ರಕ್ರಿಯೆ ಇನ್ನೂ ಮುಗಿದಿಲ್ಲ: ಶಿವರಾಜ್ ತಂಗಡಗಿ

‘ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಇಂತಿಷ್ಟು ಹಣವನ್ನು ನೀಡಬೇಕು ಎಂದು ಒಪ್ಪಂದ ಆಗಿದೆ. ಆದರೆ, ಆ ಹಣದ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.

ಕೊಪ್ಪಳ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳೇ ಕಳೆದಿದ್ದರೂ, ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಬಿಜೆಪಿಗೆ ಕಗ್ಗಂಟಾಗಿಯೇ ಉಳಿದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

‘ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಇಂತಿಷ್ಟು ಹಣವನ್ನು ನೀಡಬೇಕು ಎಂದು ಒಪ್ಪಂದ ಆಗಿದೆ. ಆದರೆ, ಆ ಹಣದ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ ಬಹುಕೋಟಿ ರೂಪಾಯಿ ಪಡೆದು, ವಂಚಿಸಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ವಿಚಾರ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಶೇ 79 ರಷ್ಟು ಬಿಜೆಪಿಗಳು ಡೀಲ್ ಮಾಸ್ಟರ್‌ಗಳಾಗಿದ್ದಾರೆ ಎಂದು ಹೇಳಿದರು.

ಕನಕಗಿರಿ ಕ್ಷೇತ್ರದ ತಿಮ್ಮರೆಡ್ಡಿ ಗಿಲ್ಲೆಸೂಗೂರು ಅವರು ಸಹ ಬಿಜೆಪಿ ಟಿಕೆಟ್ ಪಡೆಯಲು 21 ಲಕ್ಷ ರೂ. ನೀಡಿರುವುದು ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ. ಬಿಜೆಪಿಯಲ್ಲಿ ಸಚಿವರಾಗಲು 60 ಕೋಟಿಯಿಂದ 70 ಕೋಟಿ ರೂ. ಕೊಡಬೇಕು. ಮುಖ್ಯಮಂತ್ರಿಯಾಗಲು 2 ಸಾವಿರ ಕೋಟಿ ನೀಡಬೇಕು ಎಂದು ಅವರದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈ ಹಿಂದೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel