ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಮೂರು ಡಿಸಿಎಂ ಹುದ್ದೆ: ರಾಜಣ್ಣ ಹೇಳಿಕೆಗೆ ಕೆರಳಿದ ಡಿಕೆ ಶಿವಕುಮಾರ್ ಹೇಳಿದ್ದು ಹೀಗೆ....

2024ರ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂಗಳನ್ನು ನೇಮಿಸುವಂತೆ ಸಚಿವ ಸಂಪುಟ ಸಹೋದ್ಯೋಗಿ ಕೆಎನ್ ರಾಜಣ್ಣ ಹೇಳಿಕೆಗೆ ಶುಕ್ರವಾರ ಕೆರಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್,  ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ನನಗೆ ಸ್ಥಾನ ನೀಡಿದೆ ಎಂದು ಹೇಳಿದ್ದಾರೆ. 

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂಗಳನ್ನು ನೇಮಿಸುವಂತೆ ಸಚಿವ ಸಂಪುಟ ಸಹೋದ್ಯೋಗಿ ಕೆಎನ್ ರಾಜಣ್ಣ ಹೇಳಿಕೆಗೆ ಶುಕ್ರವಾರ ಕೆರಳಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್,  ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ನನಗೆ ಸ್ಥಾನ ನೀಡಿದೆ ಎಂದು ಹೇಳಿದ್ದಾರೆ. 

ಈ ಕುರಿತು ನೇರವಾಗಿ ಯಾವುದೇ ಪ್ರತಿಕ್ರಿಯೆ ನೀಡದ ಶಿವಕುಮಾರ್, ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಇಂತಹ ಆಸೆಗಳ ಅಭಿವ್ಯಕ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್‌ ಸ್ಪಂದಿಸಬೇಕಿದೆ ಎಂದರು.

ನಮ್ಮ ಪಕ್ಷದ ಹೈಕಮಾಂಡ್ ಇದೆ, ಮುಖ್ಯಮಂತ್ರಿಗಳು ನನ್ನನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ, ಅವರು ಕೆಲವೊಂದು ಮಾರ್ಗಗಳನ್ನು ಹೊಂದಿರುತ್ತಾರೆ. ಅನೇಕರಿಗೆ ಆಸೆ ಇರುತ್ತದೆ. ಎಲ್ಲರಿಗೂ ಆಸೆ ಇರುತ್ತದೆ. ಅದಕ್ಕೆ ಸ್ಪಂದಿಸಲು ಜನರಿದ್ದಾರೆ ಎಂದರು. "ನೀವು ನನ್ನ ರಾಜಕೀಯ ದಾಖಲೆಯನ್ನು ನೋಡಿದ್ದೀರಿ, ಇವತ್ತಲ್ಲ, 1985 ರಿಂದ. ನನ್ನ ಹೋರಾಟದ ಕಾರಣ, ಪಕ್ಷವು ನನ್ನನ್ನು ಈ ಸ್ಥಾನದಲ್ಲಿ ಕೂರುವಂತೆ ಮಾಡಿದೆ" ಎಂದು ಅವರು ಹೇಳಿದರು.

ಸಹಕಾರ ಸಚಿವ ರಾಜಣ್ಣ ಸೆಪ್ಟೆಂಬರ್ 16 ರಂದು ಮೊದಲು ಈ ಬೇಡಿಕೆ ಇಟ್ಟಿದ್ದರು. ಇಂದು ಸಹ ಆ ಬೇಡಿಕೆಯನ್ನು ಪುನರುಚ್ಚರಿಸಿದರು. ವೀರಶೈವ-ಲಿಂಗಾಯತ, ಎಸ್‌ಸಿ/ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಂದ ಉಪ ಮುಖ್ಯಮಂತ್ರಿಗಳನ್ನು ನೇಮಿಸಿದರೆ 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ಚೆನ್ನಾಗಿರುತ್ತದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂತಹ ವಿಚಾರವನ್ನು ತೇಲಿ ಬಿಡುವಂತೆ ಹೇಳಿದ್ದಾರೆ ಎಂಬ ಮಾತುಗಳನ್ನು ಅವರು ತಳ್ಳಿ ಹಾಕಿದ್ದಾರೆ.

ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಸರ್ಕಾರ ರಚನೆಯ ಸಮಯದಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ತೀವ್ರ ಪೈಪೋಟಿಯ ನಡುವೆ ಅವರನ್ನು ಸಮಾಧಾನಪಡಿಸುವ ಸಲುವಾಗಿ ಶಿವಕುಮಾರ್ ಏಕೈಕ ಉಪ ಮುಖ್ಯಮಂತ್ರಿ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಉನ್ನತ ನಾಯಕತ್ವವು ಬಂದಿತು ಎಂದು ಹೇಳಲಾಗುತ್ತದೆ. 

ಇತ್ತೀಚೆಗಷ್ಟೇ ಇನ್ನೂ ಮೂವರು ಡಿಸಿಎಂಗಳ ನೇಮಕಕ್ಕೆ ಸಂಪುಟದ ಒಳಗಿನಿಂದ ಧ್ವನಿ ಕೇಳಿಬರುತ್ತಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಮತ್ತು ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಭಾನುವಾರ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!