ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿ 
ರಾಜಕೀಯ

ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?

ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ.

ಬೆಂಗಳೂರು; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ.

ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಇದೀಗ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ನಗರದ ಕೆಕೆ ಗೆಸ್ಟ್ ಹೌಸ್ ನಲ್ಲಿ ನಿನ್ನೆ ಜೆಡಿಎಸ್ ಅಲ್ಪಸಂಖ್ಯಾತ  ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಮುಸ್ಲಿಂ ಮುಖಂಡರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಜೆಡಿಎಸ್ ಕಾರ್ಯಾಧ್ಯಕ್ಷ ಎನ್ ಎಂ ನಬಿ, ಮುಖಂಡರಾದ ಮೋಹಿದ್ ಅಲ್ತಾಫ್, ನಾಸೀರ್ ಉಸ್ತಾದ್,ವಕ್ತಾರ ನೂರ್ ಅಹಮ್ಮದ್ ಸೇರಿದಂತೆ ದಾವಣಗೆರೆ, ಮೈಸೂರು, ರಾಮನಗರ, ರಾಯಚೂರು, ತುಮಕೂರು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಸಾಮೂಹಿಕ ರಾಜೀನಾಮೆ ನೀಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಭೆ ಬಳಿಕ ಮಾತನಾಡಿದ ಜೆಡಿಎಸ್ ನಾಯಕ ಎನ್ಎಂ ನಬಿ ಅವರು, ಎನ್‌ಡಿಎ ಸೇರುವ ಪಕ್ಷದ ನಾಯಕರ ನಿರ್ಧಾರದಿಂದ ನಮಗೆ ನೋವಾಗಿದೆ. ಈ ಸಮಯದಲ್ಲಿ, ನಾವು ಮುಸ್ಲಿಂ ನಾಯಕರಿಂದ ಮಾತ್ರವಲ್ಲದೆ ಸಮಾನ ಮನಸ್ಕ ಜಾತ್ಯತೀತ ನಾಯಕರಿಂದಲೂ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದೇವೆ. ಬಿಜೆಪಿ ಜೊತೆ ಕೈ ಜೋಡಿಸುವ ನಿರ್ಧಾರ ನಮಗೆ ನೋವು ತಂದಿದೆ. ಹೀಗಾಗಿ ನಮಗೆ ಪಕ್ಷವನ್ನು ಬಿಡದೆ ಬೇರೆ ದಾರಿ ಇಲ್ಲ ಎಂದು ಹೇಳಿದರು.

ಏತನ್ಮಧ್ಯೆ, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಅವರು  ಮಾತನಾಡಿ, ಮುಸ್ಲಿಮರ ಬೆಂಬಲದಿಂದ ರಾಜ್ಯದಲ್ಲಿ ಜೆಡಿಎಸ್ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇಲ್ಲದಿದ್ದರೆ ಪಕ್ಷವು ಐದು ಅಥವಾ ಆರು ಸ್ಥಾನಗಳನ್ನಷ್ಟೇ ಗೆಲ್ಲುತ್ತಿದ್ದು. ಮುಸ್ಲಿಂ ಮತದಾರರಿಲ್ಲದಿದ್ದರೆ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಸೋಲಿನ ರುಚಿ ಅನುಭವಿಸುತ್ತಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT