ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜಕೀಯ

ಮತ ಸೆಳೆಯಲು ಮಹಿಳಾ ಮೀಸಲಾತಿ ಮಸೂದೆ ತರುತ್ತಿದ್ದಾರೆ ಹೊರತು ಮಹಿಳೆಯರ ಮೇಲೆ ಕಾಳಜಿಯಿಂದಲ್ಲ: ಸಿದ್ದರಾಮಯ್ಯ

ಹೆಣ್ಣುಮಕ್ಕಳಿಗೆ ಮೀಸಲಾತಿ ಕೊಡಬೇಕೆಂದು ಪ್ರಾಮಾಣಿಕ ಮನೋಭಾವ ಇರುತ್ತಿದ್ದರೆ ಆ ಮಸೂದೆ ಜಾರಿಗೆ 15 ವರ್ಷ ಎಂದು ಹೇಳುತ್ತಿರಲಿಲ್ಲ. ಎರಡನೆಯದಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿಗೆ ಏಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರು: ಮಹಿಳಾ ಮೀಸಲಾತಿ ಬಿಲ್ ಚುನಾವಣೆಗೋಸ್ಕರ ಮಾಡಿದ್ದು. ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಿರುವ ಮಹಿಳಾ ಮೀಸಲಾತಿ ಮಸೂದೆ ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವುದು. ಹೆಣ್ಣುಮಕ್ಕಳಿಗೆ ಮೀಸಲಾತಿ ಕೊಡಬೇಕೆಂದು ಪ್ರಾಮಾಣಿಕ ಮನೋಭಾವ ಇರುತ್ತಿದ್ದರೆ ಆ ಮಸೂದೆ ಜಾರಿಗೆ 15 ವರ್ಷ ಎಂದು ಹೇಳುತ್ತಿರಲಿಲ್ಲ. ಎರಡನೆಯದಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿಗೆ ಏಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ನನ್ನ ಪ್ರಕಾರ ಮಹಿಳಾ ಮೀಸಲಾತಿ ಮಸೂದೆ ಮುಂದಿನ ಸಂಸತ್ತು ಚುನಾವಣೆ ವೇಳೆ ಮತ್ತು 2029ರ ಚುನಾವಣೆ ವೇಳೆ ಕೂಡ ಜಾರಿಗೆ ಬರುವುದಿಲ್ಲ. ಮೀಸಲಾತಿ ಅನುಮೋದನೆಯಾಗಿ ಸರ್ಕಾರದ ಗೆಜೆಟ್ ಅಧಿಸೂಚನೆ ಬರಲು 2 ವರ್ಷ ಬೇಕು, ಹೀಗಿರುವಾಗ ತರಾತುರಿಯಲ್ಲಿ, ಆತುರದಿಂದ ಈ ಬಾರಿ ವಿಶೇಷ ಅಧಿವೇಶನ ಕರೆದು ಏಕೆ ಅಂಗೀಕರಿಸಬೇಕಾಗಿತ್ತು ಎಂದು ಪ್ರಶ್ನಿಸಿದರು. 

ಹೆಣ್ಣುಮಕ್ಕಳಿಗೆ ಸಹಾಯ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನಸ್ಸಿದ್ದರೆ ಈಗಿರುವ ಮೀಸಲಾತಿ ಮೇಲೆ ಮಾಡಬಹುದಿತ್ತಲ್ಲವೇ, ಕ್ಷೇತ್ರ ಮರುವಿಂಗಡಣೆ 2026ಕ್ಕೆ ಆಗುವುದು ನಂತರ ಎರಡು ವರ್ಷವಾಗುತ್ತದೆ ಜಾರಿಗೆ ಬರಲು 2028ರ ನಂತರ ಚುನಾವಣೆಗಳಲ್ಲಿ ಜಾರಿಗೆ ಬರಬಹುದಷ್ಟೆ ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT