ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜಕೀಯ

ಮತ ಸೆಳೆಯಲು ಮಹಿಳಾ ಮೀಸಲಾತಿ ಮಸೂದೆ ತರುತ್ತಿದ್ದಾರೆ ಹೊರತು ಮಹಿಳೆಯರ ಮೇಲೆ ಕಾಳಜಿಯಿಂದಲ್ಲ: ಸಿದ್ದರಾಮಯ್ಯ

ಹೆಣ್ಣುಮಕ್ಕಳಿಗೆ ಮೀಸಲಾತಿ ಕೊಡಬೇಕೆಂದು ಪ್ರಾಮಾಣಿಕ ಮನೋಭಾವ ಇರುತ್ತಿದ್ದರೆ ಆ ಮಸೂದೆ ಜಾರಿಗೆ 15 ವರ್ಷ ಎಂದು ಹೇಳುತ್ತಿರಲಿಲ್ಲ. ಎರಡನೆಯದಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿಗೆ ಏಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರು: ಮಹಿಳಾ ಮೀಸಲಾತಿ ಬಿಲ್ ಚುನಾವಣೆಗೋಸ್ಕರ ಮಾಡಿದ್ದು. ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕರಿಸಿರುವ ಮಹಿಳಾ ಮೀಸಲಾತಿ ಮಸೂದೆ ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವುದು. ಹೆಣ್ಣುಮಕ್ಕಳಿಗೆ ಮೀಸಲಾತಿ ಕೊಡಬೇಕೆಂದು ಪ್ರಾಮಾಣಿಕ ಮನೋಭಾವ ಇರುತ್ತಿದ್ದರೆ ಆ ಮಸೂದೆ ಜಾರಿಗೆ 15 ವರ್ಷ ಎಂದು ಹೇಳುತ್ತಿರಲಿಲ್ಲ. ಎರಡನೆಯದಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿಗೆ ಏಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ನನ್ನ ಪ್ರಕಾರ ಮಹಿಳಾ ಮೀಸಲಾತಿ ಮಸೂದೆ ಮುಂದಿನ ಸಂಸತ್ತು ಚುನಾವಣೆ ವೇಳೆ ಮತ್ತು 2029ರ ಚುನಾವಣೆ ವೇಳೆ ಕೂಡ ಜಾರಿಗೆ ಬರುವುದಿಲ್ಲ. ಮೀಸಲಾತಿ ಅನುಮೋದನೆಯಾಗಿ ಸರ್ಕಾರದ ಗೆಜೆಟ್ ಅಧಿಸೂಚನೆ ಬರಲು 2 ವರ್ಷ ಬೇಕು, ಹೀಗಿರುವಾಗ ತರಾತುರಿಯಲ್ಲಿ, ಆತುರದಿಂದ ಈ ಬಾರಿ ವಿಶೇಷ ಅಧಿವೇಶನ ಕರೆದು ಏಕೆ ಅಂಗೀಕರಿಸಬೇಕಾಗಿತ್ತು ಎಂದು ಪ್ರಶ್ನಿಸಿದರು. 

ಹೆಣ್ಣುಮಕ್ಕಳಿಗೆ ಸಹಾಯ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನಸ್ಸಿದ್ದರೆ ಈಗಿರುವ ಮೀಸಲಾತಿ ಮೇಲೆ ಮಾಡಬಹುದಿತ್ತಲ್ಲವೇ, ಕ್ಷೇತ್ರ ಮರುವಿಂಗಡಣೆ 2026ಕ್ಕೆ ಆಗುವುದು ನಂತರ ಎರಡು ವರ್ಷವಾಗುತ್ತದೆ ಜಾರಿಗೆ ಬರಲು 2028ರ ನಂತರ ಚುನಾವಣೆಗಳಲ್ಲಿ ಜಾರಿಗೆ ಬರಬಹುದಷ್ಟೆ ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT