ವೇದಿಕೆ ಮೇಲೆ ಶಾಸಕರು-ಸಂಸದರ ಜಟಾಪಟಿ 
ರಾಜಕೀಯ

ತಾರಕಕ್ಕೇರಿದ ಬಿಜೆಪಿ ಸಂಸದ-ಕಾಂಗ್ರೆಸ್ ಶಾಸಕರ ಜಟಾಪಟಿ: ವೇದಿಕೆ ಮೇಲೆ ಮುನಿಸ್ವಾಮಿ-ನಾರಾಯಣಸ್ವಾಮಿ ಮಾತಿನ ಚಕಮಕಿ

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ-ಕೈ ಮಿಲಾಯಿಸಲು ಜನಪ್ರತಿನಿಧಿಗಳು ಮುಂದಾಗಿದ್ದ ಘಟನೆ ನಡೆದಿದೆ.

ಕೋಲಾರ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ-ಕೈ ಮಿಲಾಯಿಸಲು ಜನಪ್ರತಿನಿಧಿಗಳು ಮುಂದಾಗಿದ್ದ ಘಟನೆ ನಡೆದಿದೆ.

ಪೊಲೀಸರು ಮಧ್ಯಪ್ರವೇಶಿಸಿ ಸಂಸದರನ್ನು ವೇದಿಕೆಯಿಂದ ಕರೆದುಕೊಂಡು ಹೋಗಿದ್ದಾರೆ. ಕೋಲಾರದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ಮಾತನಾಡಿದರು. ಈ ವೇಳೆ ಅರಣ್ಯ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುವಾಗ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಅವರಿಗೆ ಭೂಗಳ್ಳರನ್ನು ಪಕ್ಕದಲ್ಲಿಯೇ ಕೂರಿಸಿಕೊಂಡಿದ್ದೀರಾ ಎಂದು ಕುಟುಕಿದರು.

ಇದರಿಂದ ಬೈರತಿ ಸುರೇಶ್‌ ಅವರ ಪಕ್ಕದಲ್ಲಿ ಕುಳಿತಿದ್ದ ಶಾಸಕ ಎಸ್‌ಎನ್‌ ನಾರಾಯಣಸ್ವಾಮಿ ಕೆರಳಿ ಸಂಸದ ಎಸ್‌ ಮುನಿಸ್ವಾಮಿ ಅವರಿಗೆ ಏಕವಚನದಲ್ಲಿಯೇ ಸವಾಲು ಹಾಕಿದರು. ಇದರಿಂದ ಕೆರಳಿದ ಸಂಸದ ಎಸ್‌ ಮುನಿಸ್ವಾಮಿ ಶಾಸಕರತ್ತ ನುಗ್ಗಿ ಬಂದರು. ಈ ವೇಳೆ ಅಲ್ಲಿಯೇ ಇದ್ದ ಎಸ್ ಪಿ ಸಂಸದರನ್ನು ಎಳೆದೊಯ್ದರು.

ನಂತರ ಮುನಿಸ್ವಾಮಿ ಅವರನ್ನು ಉನ್ನತ ಮಟ್ಟದ ಜಿಲ್ಲಾಧಿಕಾರಿಗಳು ಸಮಾಧಾನಪಡಿಸಿ ವೇದಿಕೆಗೆ ಹಿಂತಿರುಗಿ  ಕರೆತಂದರು. ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚುನಾಯಿತ ಪ್ರತಿನಿಧಿಗಳು ಈ ರೀತಿ ನಡೆದುಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಕಾರ್ಯಕ್ರಮವು ಜನರ ಹಿತದೃಷ್ಟಿಯಿಂದ ಕೂಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸುವುದು ಸಂಸದರು ಮತ್ತು ಶಾಸಕರ ಬದ್ಧ ಕರ್ತವ್ಯವಾಗಿದೆ. ತಮ್ಮ ವೈಯಕ್ತಿಕ ವಿಚಾರಗಳಿಂದ ದೂರವಿದ್ದು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು. "ನಾನು ಅವರಿಬ್ಬರ ಜೊತೆ ಮಾತನಾಡುತ್ತೇನೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

SCROLL FOR NEXT