ಡಿಕೆ.ಶಿವಕುಮಾರ್ 
ರಾಜಕೀಯ

ಮೈತ್ರಿಯಿಂದಾಗಿ ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್'ನತ್ತ ಮುಖ ಮಾಡುತ್ತಿದ್ದಾರೆ: ಡಿಕೆ.ಶಿವಕುಮಾರ್

ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ತಪ್ಪು ಸಂದೇಶವನ್ನು ಜೆಡಿಎಸ್-ಬಿಜೆಪಿ ಮೈತ್ರಿಕೂಟ ರವಾನಿಸಿದೆ' ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ಬೆಂಗಳೂರು: ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ತಪ್ಪು ಸಂದೇಶವನ್ನು ಜೆಡಿಎಸ್-ಬಿಜೆಪಿ ಮೈತ್ರಿಕೂಟ ರವಾನಿಸಿದೆ' ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜೆಡಿಎಸ್ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಂಗಳವಾರ ರಾತ್ರಿ ಮೂರು ಜನ ಮಾಜಿ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಸೇರುವವರ ಸಂಖ್ಯೆ ಹೆಚ್ಚಾಗಲಿದೆ. ನಾವೆಲ್ಲಾ ಜಾತ್ಯತೀತ ಸರ್ಕಾರ ಇರಬೇಕು ಎಂದು ಹೋರಾಟ ಮಾಡಿದೆವು. ಈಗ ಸರ್ಕಾರ ಬೀಳಿಸಿದವರ ಜೊತೆಯಲ್ಲೇ ಕೈ ಜೋಡಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಜೆಡಿಎಸ್- ಬಿಜೆಪಿ ಮೈತ್ರಿ ನಂತರ ಕಾಂಗ್ರೆಸ್ ಸೇರುವಂತಹವರ ಸಂಖ್ಯೆ ಹೆಚ್ಚಾಗುತ್ತಿದೆ. ಮೈತ್ರಿಯನ್ನು ವಿರೋಧಿಸಿ ಪಕ್ಷ ತೊರೆದು ಬರುತ್ತಿದ್ದಾರೆ. ನಮಗೆ ಮುಖಂಡರಿಗಿಂತ ಕಾರ್ಯಕರ್ತರು ಬಹಳ ಮುಖ್ಯ, ಶಿವಮೊಗ್ಗ, ರಾಮನಗರ, ಬೆಂಗಳೂರು ನಗರ ಹೀಗೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ತಂಡೋಪತಂಡವಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಮರ್ಥ್ಯವಿರುವ ಅಭ್ಯರ್ಥಿಗಳೆಲ್ಲ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ” ಎಂದು ಹೇಳಿದರು.

ಆಪರೇಷನ್ ಹಸ್ತ ನಾವೆಂದೂ ಮಾಡುವುದಿಲ್ಲ. ನಮ್ಮದು ಕೋ- ಆಪರೇಷನ್ ಎಂದು ಪದೇ ಪದೇ ಹೇಳುತ್ತಿದ್ದೇನೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

SCROLL FOR NEXT