ಎಚ್‌ಡಿ ಕುಮಾರಸ್ವಾಮಿ 
ರಾಜಕೀಯ

ಮೈತ್ರಿ ಸಂಬಂಧ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚಿಸಲಾಗಿದೆ: ಎಚ್‌.ಡಿ. ಕುಮಾರಸ್ವಾಮಿ

ಬಿಜೆಪಿ ಜೊತೆಗಿನ ಪಕ್ಷದ ಮೈತ್ರಿಯ ಹಿಂದಿನ ಉದ್ಧೇಶವನ್ನು ಮುಸ್ಲಿಂ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ವಿನಂತಿಸಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಮೈತ್ರಿ ಕುರಿತಾದ ಎಲ್ಲಾ ವಿಚಾರಗಳನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಜೊತೆಗಿನ ಪಕ್ಷದ ಮೈತ್ರಿಯ ಹಿಂದಿನ ಉದ್ಧೇಶವನ್ನು ಮುಸ್ಲಿಂ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ವಿನಂತಿಸಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಮೈತ್ರಿ ಕುರಿತಾದ ಎಲ್ಲಾ ವಿಚಾರಗಳನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಜೊತೆ ಚರ್ಚಿಸಲಾಗಿದೆ. ಮೈತ್ರಿ ವಿಚಾರದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ಇಬ್ರಾಹಿಂ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಹಲವು ಮುಸ್ಲಿಂ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮೈತ್ರಿ ಘೋಷಣೆಯ ನಂತರ ಇಬ್ರಾಹಿಂ ಅವರು ನಮ್ಮನ್ನು ಸಂಪರ್ಕಿಸಿಲ್ಲ ಎಂದರು.

ಯಾರಿಗೂ ಅಗೌರವ ತೋರಬಾರದು ಎಂದು ಕೆಲ ವಿಚಾರಗಳನ್ನು ಮುಚ್ಚಿಟ್ಟಿದ್ದೇವೆ. ನಮ್ಮ ಪಕ್ಷದ ಉಳಿವು ಮತ್ತು ದೇಶದಲ್ಲಿನ ಘಟನೆಗಳು, ಇವತ್ತಿನ ಅವಶ್ಯಕತೆಗೆ ತಕ್ಕಂತೆ ನಾವು ತೀರ್ಮಾನ ಮಾಡಿದ್ದೇವೆ. ಮೈತ್ರಿಯಿಂದ ನಷ್ಟದ ಪ್ರಶ್ನೆಯೇ ಇಲ್ಲ. ಇನ್ನು ಹೆಚ್ಚಿನ ಶಕ್ತಿ ಬರಲಿದೆ. ಯಾರು ಕೂಡ ಪಕ್ಷಕ್ಕೆ ರಾಜೀನಾಮೆ ಕೊಡುವುದಿಲ್ಲ. ಕೆಲ ಕಾರ್ಯಕರ್ತರು ರಾಜೀನಾಮೆ ನೀಡಿರಬಹುದು ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಮುಸ್ಲಿಂ ಮತಗಳಿಂದ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿ ಆ ಸಮುದಾಯ ಪ್ರಬಲವಾಗಿದ್ದರೂ, ನನಗೆ ಮತ ಹಾಕಿಲ್ಲ ಎಂದರು.

ನೈಸ್ ಸಂಸ್ಥೆಯಿಂದ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ರೈತರಿಗೆ ವಾಪಸ್ ನೀಡದಿದ್ದಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ರೈತ ಸಂಘಟನೆಗಳು ಮತ್ತು ರೈತರೊಂದಿಗಿನ ಸಭೆ ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ, 'ಯೋಜನೆಗೆ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿರುವ ಹೆಚ್ಚುವರಿ ಭೂಮಿಯನ್ನು ಹಿಂದಿರುಗಿಸಲು ಸರ್ಕಾರ ವಿಫಲವಾದರೆ, ನಾವು ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಕಂಡುಬಂದ ಮಾದರಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ' ಎಂದು ಎಚ್ಚರಿಸಿದರು.

ಕಾವೇರಿ ನದಿ ನೀರು ವಿವಾದ ಇತ್ಯರ್ಥವಾದ ನಂತರ ನೈಸ್ ವಿರುದ್ಧದ ಹೋರಾಟಕ್ಕೆ ಇಳಿಯುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಕರ್ನಾಟಕ ಪ್ರಾಂತ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಜನವಾದಿ ಮಹಿಳಾ ಸಂಘಟನೆಯ ಪ್ರತಿನಿಧಿಗಳು ಸೇರಿದಂತೆ ಹಲವಾರು ರೈತ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

IPL 2026: RCB ತವರು ಮೈದಾನ ಕೊನೆಗೂ ಬಹುತೇಕ ಫಿಕ್ಸ್, ಈ ಎರಡು ಮೈದಾನಗಳಲ್ಲೇ ಪಂದ್ಯ!

SCROLL FOR NEXT