ಸಂಯುಕ್ತಾ ಪಾಟೀಲ್ 
ರಾಜಕೀಯ

ವೀಣಾ ಕಾಶಪ್ಪನವರ್ ನನ್ನ ಪರ ಪ್ರಚಾರ ಮಾಡುತ್ತಾರೆಂಬ ವಿಶ್ವಾಸವಿದೆ: ಸಂಯುಕ್ತಾ ಪಾಟೀಲ್

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮತ್ತು ಅವರ ಶಾಸಕ ಪತಿ ವಿಜಯಾನಂದ ಕಾಶಪ್ಪನವರ್ ಅವರು ತಮ್ಮ ಅತೃಪ್ತಿಯನ್ನು ಬಿಟ್ಟು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮತ್ತು ಅವರ ಶಾಸಕ ಪತಿ ವಿಜಯಾನಂದ ಕಾಶಪ್ಪನವರ್ ಅವರು ತಮ್ಮ ಅತೃಪ್ತಿಯನ್ನು ಬಿಟ್ಟು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಶಪ್ಪನವರ್ ಕುಟುಂಬ ಸುಮಾರು ಐದು ದಶಕಗಳಿಂದ ಕಾಂಗ್ರೆಸ್‌ನೊಂದಿಗೆ ಸಂಪರ್ಕ ಹೊಂದಿದೆ, ಆದ್ದರಿಂದ ಅವರು ಪಕ್ಷಕ್ಕೆ ನಿಷ್ಠೆ ಪ್ರದರ್ಶಿಸಿ ಪ್ರಚಾರದಲ್ಲಿ ತೊಡಗುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ವೀಣಾ ಅಸಮಾಧಾನಗೊಂಡಿದ್ದಾರೆ.

ವೀಣಾ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಂಸದ ಪಿಸಿ ಗದ್ದಿಗೌಡರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿಯೂ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಪಕ್ಷವು ಜವಳಿ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಅವರನ್ನು ಆಯ್ಕೆ ಮಾಡಿದೆ. ಇಬ್ಬರೂ ಕೂಡ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದಾರೆ.

ವೀಣಾ ಅವರ ಅತೃಪ್ತಿಯನ್ನು ಕಡಿಮೆ ಮಾಡಲು ಸಂಯುಕ್ತಾ ಪಾಟೀಲ್ ಪ್ರಯತ್ನಿಸುತ್ತಿದ್ದಾರೆ. ಟಿಕೆಟ್ ಪಡೆಯಲು ವಿಫಲರಾದಾಗ ಒಬ್ಬ ವ್ಯಕ್ತಿಯು ಅಸಮಾಧಾನಗೊಳ್ಳುವುದು ಸಹಜ. ಆದರೂ ವೀಣಾ ಕಾಶಪ್ಪನವರ್ ಮತ್ತು ಅವರ ಪತಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ ಎಂಬ ಆಶಾವಾದ ನನಗಿದೆ ಎಂದು ಅವರು ಹೇಳಿದರು.

ಆದರೆ, ತಾವು ವೀಣಾ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿಲ್ಲ ಮತ್ತು ಪಕ್ಷದ ಮುಖಂಡರು ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಜಿಲ್ಲೆಯ ಜನರ ಸೇವೆಗೆ ಅವಕಾಶ ಕೋರಿ ರಾಷ್ಟ್ರಮಟ್ಟದಲ್ಲಿ ಶ್ರಮಿಸುವುದಾಗಿ ಹೇಳಿದರು.

ಸತತ ನಾಲ್ಕು ಚುನಾವಣೆಗಳನ್ನು ಗೆದ್ದಿರುವ ಗದ್ದಿಗೌಡರ್ ವಿರುದ್ಧ ಗೆಲ್ಲುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಂಯುಕ್ತಾ, ಗದ್ದೀಗೌಡರ್ ನಿವೃತ್ತಿಯಾಗುವ ಸಮಯ ಬಂದಿದೆ. ಜನರು ಅಭಿವೃದ್ಧಿಯನ್ನು ಬಯಸುತ್ತಿರುವ ಕಾರಣ ಈ ಬಾರಿ ರಾಮಮಂದಿರ ಮತ್ತು ಮೋದಿ ಅಲೆಯಂತಹ ಸಮಸ್ಯೆಗಳು ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT