ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜಕೀಯ

ಪಕ್ಷ ಬದಲಿಸುವಂತೆ ನಮ್ಮ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ. ಆಮಿಷ: ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಬರಬೇಕಾದ ಅನುದಾನ ಬಗ್ಗೆ ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣದ ಬಗ್ಗೆ ತಾವು ನೀಡಿರುವ ಹೇಳಿಕೆ ಸುಳ್ಳು ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಕರ್ನಾಟಕಕ್ಕೆ ಜಿಎಸ್‌ಟಿ ಬಾಕಿ ಮತ್ತು ಬರ ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಅವರು ಮತ್ತೊಮ್ಮೆ ಒತ್ತಾಯಿಸಿದರು.

ಲೋಕಸಭೆ ಚುನಾವಣೆಗೆ ಮುನ್ನ ಆದಾಯ ತೆರಿಗೆ ಇಲಾಖೆಯು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಖಾತೆಗಳನ್ನು ಸ್ಥಗಿತಗೊಳಿಸಿರುವ ಕುರಿತು, ಇಂತಹ ಪರಿಸ್ಥಿತಿಯಲ್ಲಿ ಚುನಾವಣಾ ಪ್ರಚಾರ ನಡೆಸುವುದು ಸವಾಲಿನ ಸಂಗತಿಯಾಗಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಪ್ರಮುಖ ವಿರೋಧ ಪಕ್ಷವಾಗಿದ್ದು, ಹಣಕ್ಕೆ ಸಮಸ್ಯೆಯಾಗಲಿದೆ ಎಂದಿದ್ದಾರೆ.

ರಾಜ್ಯಕ್ಕೆ ಬರಬೇಕಿರುವ ಹಣದ ಮೇಲೆ ಕೇಂದ್ರವು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗೂ ಹೆಚ್ಚು ಧನಸಹಾಯ ನೀಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಿತ್ತು. ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಅದನ್ನು ಸೇರಿಸಲಾಗಿತ್ತು. ಆದರೆ ಒಂದು ರೂಪಾಯಿ ಕೂಡ ಮಂಜೂರು ಮಾಡಿಲ್ಲ ಎಂದು ಆರೋಪಿಸಿದರು.

15ನೇ ಹಣಕಾಸು ಆಯೋಗದ ಶಿಫಾರಸಿನಂತೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದರೂ ಹಣ ಬಂದಿಲ್ಲ. ಪೆರಿಫೆರಲ್ ರಿಂಗ್ ರಸ್ತೆಗೆ 3.000 ಕೋಟಿ, ಟ್ಯಾಂಕ್‌ಗಳ ಪುನಶ್ಚೇತನಕ್ಕೆ 3.000 ಕೋಟಿ ನೀಡುವುದಾಗಿ ಹೇಳಿದ್ದರೂ ಅದನ್ನೂ ಮಂಜೂರು ಮಾಡಿಲ್ಲ. ಈ ಆರ್ಥಿಕ ವರ್ಷದ ಕೊನೆಯ ದಿನವೆಂದು ಪರಿಗಣಿಸಿ ಇಂದು ಸಂಜೆಯೊಳಗೆ ಪಾವತಿಸುತ್ತಾರೆಯೇ ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರ ವಿರುದ್ಧ ಲೇವಡಿ ಮಾಡಿದರು.

ನಿರ್ಮಲಾ ಸೀತಾರಾಮನ್ ನಿವೃತ್ತಿ ಘೋಷಿಸುವರೇ?: ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಹಣವನ್ನು ನೀಡಿಲ್ಲ ಎಂಬುದು ಸುಳ್ಳಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ, ಆದರೆ ಅದು ನಿಜವಾದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜಕೀಯದಿಂದ ನಿವೃತ್ತಿ ಹೊಂದುವರೇ? ಸಾಮಾನ್ಯ ವೇದಿಕೆಯಲ್ಲಿ ನಮ್ಮನ್ನು ಎದುರಿಸಲು ಮತ್ತು ಈ ಸಮಸ್ಯೆಗಳನ್ನು ಸ್ಪಷ್ಟಪಡಿಸಬೇಕೆಂದು ಅವರಿಗೆ ಸವಾಲು ಹಾಕುತ್ತೇನೆ. ಅವರು ರಾಜ್ಯಕ್ಕೆ ನ್ಯಾಯಸಮ್ಮತವಾದ ಬಾಕಿಯನ್ನು ನೀಡದಿದ್ದರೆ, ನಾವು ರಾಜ್ಯವನ್ನು ಹೇಗೆ ಅಭಿವೃದ್ಧಿಪಡಿಸುವುದು, ನೀರಾವರಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ ಮತ್ತು ಇತರ ನಿರ್ಣಾಯಕ ಕ್ಷೇತ್ರಗಳಿಗೆ ನಾವು ಹಣವನ್ನು ಹೇಗೆ ಖರ್ಚು ಮಾಡುವುದು ಕೇಂದ್ರ ಸರಕಾರ ಮಾಡುವುದೇ? ಬರ ಪರಿಹಾರಕ್ಕೂ ಹಣ ನೀಡಿಲ್ಲ ಎಂದು ಸಹ ಸಿದ್ದರಾಮಯ್ಯಆರೋಪಿಸಿದರು.

ಸಿದ್ದರಾಮಯ್ಯನವರ ದುರಹಂಕಾರವನ್ನು ಮುರಿಯುತ್ತೇನೆ ಎಂಬ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನನಗೆ ಯಾವುದೇ ಅಧಿಕಾರ ಅಥವಾ ಹಣದ ಮೇಲೆ ದುರಹಂಕಾರವಿಲ್ಲ. ಎನ್‌ಡಿಎ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆ ಜಾರಿಗೊಳಿಸುವುದಾಗಿ ಗೌಡರು ತಮ್ಮ ಭಾಷಣದಲ್ಲಿ ಹೇಳುತ್ತಿದ್ದಾರೆ. ಅವರು ಈಗ ಅದನ್ನು ಏಕೆ ಮಾಡಬಾರದು, ಈಗಾಗಲೇ ಅಧಿಕಾರದಲ್ಲಿ ಇದ್ದಾರಲ್ಲವೇ ಎಂದು ಕೇಳಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಉತ್ತಮ ವೈದ್ಯ, ಆದರೆ ಉತ್ತಮ ರಾಜಕಾರಣಿ ಅಲ್ಲ ಎಂದರು.

ಕೋಲಾರದಲ್ಲಿ ಕಾಂಗ್ರೆಸ್ ಬಿಕ್ಕಟ್ಟು ಎದುರಿಸುತ್ತಿರುವ ಕುರಿತು, ಎರಡು ಮೂರು ದಿನಗಳಲ್ಲಿ ಕೋಲಾರದ ಬಗ್ಗೆ ಹೇಳುತ್ತೇನೆ ಎಂದರು.

ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಎಷ್ಟು ಸ್ಥಾನ ಗೆಲ್ಲಬಹುದು ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ, ಮೈಸೂರು ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ನಾವು 15 ಸ್ಥಾನಗಳನ್ನು ಗೆಲ್ಲುವುದು ಖಂಡಿತ, ಅದು 20 ಸ್ಥಾನಗಳಿಗೂ ಏರಿಕೆಯಾಗದೆ ಅಚ್ಚರಿಯಿಲ್ಲ ಎಂದರು. ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ವೈಫಲ್ಯದಿಂದ ದೇಶದ ಜನತೆ ಬೇಸತ್ತಿದ್ದಾರೆ, ಅದಕ್ಕೆ ಪೂರಕವಾಗಿ ಈ ಬಾರಿ ಮೋದಿ ಅಲೆ ಇಲ್ಲ. ನಮ್ಮ ಖಾತರಿಗಳು ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳು ಕಾಂಗ್ರೆಸ್‌ಗೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಎಂದರು.

ಕಳೆದ ಬಾರಿ, ಅವರು ಪುಲ್ವಾಮಾ ಮತ್ತು ಆರ್ಟಿಕಲ್ 370 ಬಗ್ಗೆ ಮಾತನಾಡಿದರು. ಈ ಬಾರಿ ಅವರು ಮತದಾರರಿಗೆ ಏನು ಹೇಳುತ್ತಾರೆ, ಬಿಜೆಪಿ 400 ಸೀಟು ಗೆಲ್ಲುವುದು ಖಚಿತವಾಗಿದ್ದರೆ ಬೇರೆ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿದ್ದು ಏಕೆ ಮೋದಿ ಸರ್ಕಾರದಿಂದ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಯ ಸಂಪೂರ್ಣ ದುರುಪಯೋಗವು ಅವರನ್ನು ಚುನಾವಣೆಯಲ್ಲಿ ಹಿಮ್ಮುಖಗೊಳಿಸುತ್ತದೆ ಮತ್ತು ತೊಂದರೆಗೆ ಸಿಲುಕಿಸುತ್ತದೆ ಎಂದರು.

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನಗೊಳ್ಳುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಉತ್ತರಿಸಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ಮಾಡಿದ್ದನ್ನು ಕರ್ನಾಟಕದಲ್ಲಿ ಮಾಡಲು ಸಾಧ್ಯವಿಲ್ಲ. ಪಕ್ಷ ಬದಲಿಸುವಂತೆ ನಮ್ಮ ಶಾಸಕರಿಗೆ ಬಿಜೆಪಿಯವರು 50 ಕೋಟಿ ರೂಪಾಯಿ ಆಮಿಷವೊಡ್ಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT