ಸಾಂದರ್ಭಿತ ಚಿತ್ರ 
ರಾಜಕೀಯ

ಲೋಕಸಭೆ ಚುನಾವಣೆ: ಪ್ರತಿ ಬೂತ್‌ನಲ್ಲಿ ಶೇಕಡಾ 10 ರಷ್ಟು ಹೆಚ್ಚು ಮತ ಗಳಿಕೆ; ಜೆಡಿಎಸ್- ಬಿಜೆಪಿ ಮೈತ್ರಿ ಗುರಿ!

2019 ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಕರ್ನಾಟಕ ಬಿಜೆಪಿ ಈ ಬಾರಿ ಪ್ರತಿ ಬೂತ್‌ನಲ್ಲಿ ಶೇ. 10 ರಷ್ಟು ಹೆಚ್ಚು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ.

ಬೆಂಗಳೂರು: 2019 ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಕರ್ನಾಟಕ ಬಿಜೆಪಿ ಪ್ರತಿ ಬೂತ್‌ನಲ್ಲಿ ಶೇ. 10 ರಷ್ಟು ಹೆಚ್ಚು ಮತಗಳನ್ನು ಗಳಿಸುವ ಗುರಿಯನ್ನು ಹೊಂದಿದೆ. ಈ ಬಾರಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಪಕ್ಷ ಉತ್ತಮ ಮತಗಳಿಕೆಯ ನಿರೀಕ್ಷೆಯಲ್ಲಿದೆ. ಕರ್ನಾಟಕದಲ್ಲಿ 58,000 ಮತಗಟ್ಟೆಗಳಿವೆ.

2019ರಲ್ಲಿ ಬಿಜೆಪಿ 28 ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದಿತ್ತು ಮತ್ತು ಮಂಡ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಿತ್ತು. 3.48 ಕೋಟಿ ಮತಗಳಲ್ಲಿ ಬಿಜೆಪಿ 1.8 ಕೋಟಿ ಗಳಿಸಿದ್ದು, ಪಕ್ಷಕ್ಕೆ ಶೇ 51.75ರಷ್ಟು ಮತಗಳು ಬಂದಿವೆ.

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಚುನಾವಣಾ ನಿರ್ವಹಣಾ ಸಮಿತಿಯ ಸಂಯೋಜಕರೂ ಆಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, 2019 ರ ಸಂಖ್ಯೆಗಿಂತ ಪ್ರತಿ ಬೂತ್‌ನಲ್ಲಿ ಪಕ್ಷವು ಶೇಕಡಾ 10 ರಷ್ಟು ಹೆಚ್ಚು ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಇದರರ್ಥ ಜೆಡಿಎಸ್ ಜೊತೆಗೆ ಕರ್ನಾಟಕದಲ್ಲಿ ಅದರ ಮತ ಹಂಚಿಕೆ ಉತ್ತಮವಾಗಿರುತ್ತದೆ. ಪಕ್ಷವು ಪ್ರಮುಖ ನಾಯಕರನ್ನು ಒಳಗೊಂಡಿದ್ದು ಪ್ರತಿ ಬೂತ್‌ನಿಂದ 50 ರಿಂದ 100 ಮತದಾರರನ್ನು ಒಳಗೊಂಡಿರುವ ಪುಟವನ್ನು ಪಕ್ಷದ ಕಾರ್ಯಕರ್ತನಿಗೆ ನೀಡಲಾಗುತ್ತದೆ. ಈ ಪುಟದ ಪ್ರಮುಖರು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಪಡೆಯಲು ಪ್ರತಿ ಮನೆಗೆ ಭೇಟಿ ನೀಡುತ್ತಾರೆ.

ಮೂಲಗಳ ಪ್ರಕಾರ, ಅವರು ಈಗಾಗಲೇ ಈ ಮತದಾರರೊಂದಿಗೆ ಎರಡು ಸುತ್ತಿನ ಸಂವಾದ ಪೂರ್ಣಗೊಳಿಸಿದ್ದಾರೆ. 2019 ರಲ್ಲಿ ಜೆಡಿಎಸ್ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಹಾಸನದ ಏಕೈಕ ಸ್ಥಾನವನ್ನು ಗೆದ್ದಿದೆ . ಪಕ್ಷವು ಕೇವಲ ಏಳು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ, ಅದು 34 ಲಕ್ಷ ಮತಗಳನ್ನು ಪಡೆದಿದೆ, ಅಂದರೆ ಶೇಕಡಾ 10 ರಷ್ಟು ಮತ ಹಂಚಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ನಾವು ಈ ಪಾಲನ್ನು ಪಡೆದರೆ ಮತ್ತು ಬಿಜೆಪಿ ಮತ ಪಾಲನ್ನು ಹೆಚ್ಚಿಸಿದರೆ, ನಾವು ಜಂಟಿ ಮತಗಳನ್ನು ಶೇಕಡಾ 15 ಕ್ಕಿಂತ ಹೆಚ್ಚು ಹೆಚ್ಚಿಸಬಹುದು. ಜೆಡಿಎಸ್ ಅಸ್ತಿತ್ವ ಹೊಂದಿರುವ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಮತಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ವರ್ಷ ಬಿಜೆಪಿ 25 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಉಳಿದ ಮೂರು ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT