ಸಿಎಂ ಸಿದ್ದರಾಮಯ್ಯ 
ರಾಜಕೀಯ

ಜೆಡಿಎಸ್ ಹುಟ್ಟಿದ್ದು ಹೇಗೆ ಗೊತ್ತಾ? ರಾಜ್ಯದಲ್ಲಿ ಜನತಾದಳ ಜನಿಸಿದ ಕಥೆ ಹೇಳಿದ ಸಿದ್ದರಾಮಯ್ಯ!

ಜೆಡಿಎಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜಾತ್ಯತೀತ ಜನತಾದಳ ಹುಟ್ಟಿದ ಕಥೆ ಹೇಳಿದ್ದಾರೆ.

ಮೈಸೂರು: ಜೆಡಿಎಸ್ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜಾತ್ಯತೀತ ಜನತಾದಳ ಹುಟ್ಟಿದ ಕಥೆ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜೆಡಿಎಸ್ ಹುಟ್ಟಿದ್ದು ಹೇಗೆ ಗೊತ್ತಾ? 1999 ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ ಸೇರಿದಂತೆ ಅನೇಕರು ಜನತಾದಳ ಬಿಟ್ಟು ಹೋದರು. ಬಳಿಕ ಬಿಜೆಪಿ ಜೊತೆ ಸೇರಿಕೊಂಡು ಜೆಡಿಯು ಮಾಡಿಕೊಂಡ್ರು‌. ಆಗ ನಾನು, ಎಚ್.ಡಿ.ದೇವೇಗೌಡರ ಬಳಿ ಹೋಗಿ ಜೆಡಿಎಸ್ ಮಾಡೋಣ ಎಂದು ಹೇಳಿದೆ. ನಂತರ ಜೆಡಿಎಸ್ ಹುಟ್ಟಿಕೊಂಡಿತು ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಕರ್ನಾಟಕದಲ್ಲಿ ಜೆಡಿಎಸ್​ ಹುಟ್ಟು ಹಾಕಿದ್ದೆ ತಾವು ಎನ್ನುವ ಅರ್ಥದಲ್ಲಿ ಸಿಎಂ ಹೇಳಿದ್ದಾರೆ.

ನಾನು ಜೆಡಿಎಸ್ ಸಂಸ್ಥಾಪಕ ಅಧ್ಯಕ್ಷ ಆಗಿದ್ದೆ. ಆದರೆ ನಂತರ ನನ್ನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಿದರು. ಜೆಡಿಎಸ್‌ನಿಂದ ನನಗೆ ಅನ್ಯಾಯ ಆಗಿದೆ ಎಂದು ಹೇಳಿದರು.

ನಾನು ದೇವೇಗೌಡರ ಜೊತೆ ಹಲವು ವರ್ಷಗಳ ಕಾಲ ಇದ್ದವನು. 2009ರಲ್ಲಿ ಜನತಾದಳ ವಿಭಜಯನೆಯಾತು. ಬೈರೇಗೌಡರು, ಬೊಮ್ಮಾಯಿ ಎಲ್ಲಾ ಜೆ.ಎಚ್.ಪಟೇಲ್ ಜೊತೆ ಹೊದ್ರು. ನಾವು ಹೋಗಲಿಲ್ಲ. ನಾನು ದೇವೇಗೌಡರು ಎಲ್ಲಾ ಸೇರಿ ಜೆಡಿಎಸ್ ಮಾಡಿದ್ವಿ‌. ನಾನು ಜೆಡಿಎಸ್ ನ ಸಂಸ್ಥಾಪಕ ಅಧ್ಯಕ್ಷ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷ ಆಗಿದ್ರು. ನಾನು ಆರು ವರ್ಷ ಪಕ್ಷ ಕಟ್ಟಿದ್ದೇನೆ. ಆದರೂ ಜೆಡಿಎಸ್ ಪಕ್ಷದಿಂದ ನನ್ನನ್ನೇ ಹೊರಗೆ ಹಾಕಿದರು ಜೆಡಿಎಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಅನ್ನು ನಾನು ಬಿಡಿಲಿಲ್ಲ. ಮಿಸ್ಟರ್ ದೇವೇಗೌಡ ನಮ್ಮನ್ನು ಉಚ್ಚಾಟಿಸಿ ಹೊರಗೆ ಕಳಿಸಿದರು. ಆದರೆ, ಈಗ ನಾನೇ ಜೆಡಿಎಸ್ ಬಿಟ್ಟು ಬಂದೆ ಅಂತಾ ಸುಳ್ಳು ಹೇಳುತ್ತಾರೆ. ಉಪಯೋಗಿಸಿ ಕೊಳ್ಳೋದು ಬಿಸಾಕುವುದು ಜೆಡಿಎಸ್ ಕೆಲಸ. ಬಿಜೆಪಿ ಕೋಮುವಾದಿ ಪಕ್ಷ. ಹೀಗಾಗಿ ಅವರ ಜೊತೆ ಹೋದ ಜೆಡಿಎಸ್ ಜಾತ್ಯತೀತ ಪದ ಕೈ ಬಿಡಲಿ ಅಂತಾ ಹೇಳಿದೆ. ಅದಕ್ಕೆ ನನ್ನ ಗರ್ವಭಂಗ ಮಾಡಿ ಅಂತಾ ದೇವೇಗೌಡರು ಹೇಳುತ್ತಾರೆ. 2006ರ ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ನೀವು ನನ್ನ ಕೈ ಹಿಡಿಯದೆ ಇದ್ದಿದ್ದರೆ ನನ್ನ ರಾಜಕೀಯ ಅಂತ್ಯವಾಗುತ್ತಿತ್ತು. ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಯಡಿಯೂರಪ್ಪ, ಕುಮಾರಸ್ವಾಮಿ, ದೇವೇಗೌಡರು ಎಲ್ಲಾ ಸೇರಿ ನನ್ನ ಸೋಲಿಸೋಕೆ ಬಂದ್ರು. ಆದರೆ ಜನ ನನ್ನ ಕೈ ಬಿಡಲಿಲ್ಲ. ಹೀಗಾಗಿ ಎರಡು ಬಾರಿ ಸಿಎಂ ಆಗಿದ್ದೇನೆ ಎಂದು ಈ ಹಿಂದಿನ ರಾಜಕಾರಣವನ್ನು ಸಿಎಂ ಮೆಲುಕು ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT