ಸತ್ಯಜಿತ್ ಸುರತ್ಕಲ್  
ರಾಜಕೀಯ

ಕಾಂಗ್ರೆಸ್ ಬೆನ್ನಿಗೆ ಹಿಂದುತ್ವ ಪೋಸ್ಟರ್ ಬಾಯ್ ಸತ್ಯಜಿತ್ ಸುರತ್ಕಲ್: ದಕ್ಷಿಣ ಕನ್ನಡ-ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಸಾಧ್ಯತೆ!

ಬಿಜೆಪಿಯಲ್ಲಿ ಬ್ರಾಹ್ಮಣ, ಲಿಂಗಾಯಿತ, ಮತ್ತು ಬಂಟರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ. ಬಿಲ್ಲವರು ಈಡಿಗರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರಾಗಿರುವ ಹಿಂದುತ್ವವಾದಿ ಮುಖಂಡ ಸತ್ಯಜಿತ್ ಸುರತ್ಕಲ್ ಆರೋಪಿಸಿದರು.

ಮಂಗಳೂರು: ಬಿಜೆಪಿಯಲ್ಲಿ ಬ್ರಾಹ್ಮಣ, ಲಿಂಗಾಯಿತ, ಮತ್ತು ಬಂಟರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ. ಬಿಲ್ಲವರು ಈಡಿಗರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರಾಗಿರುವ ಹಿಂದುತ್ವವಾದಿ ಮುಖಂಡ ಸತ್ಯಜಿತ್ ಸುರತ್ಕಲ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ನ ಆರ್‌ ಪದ್ಮರಾಜ್‌, ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್‌ ಪೂಜಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್‌ ಅವರನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಒಂದು ಕಾಲದಲ್ಲಿ ಸಮುದಾಯದ ನಾಲ್ಕೈದು ಸಂಸದರಿದ್ದರು, ಆದರೆ ಈಗ ಒಬ್ಬರು ಇಲ್ಲದಂತಾಗಿದ್ದಾರೆ ಎಂದು ಹೇಳಿದ ಅವರು, ಸಮುದಾಯದ ಮುಖಂಡರು ಮತ್ತೆ ಸಂಸದರಾಗುವುದನ್ನು ನೋಡಲು ಉತ್ತಮ ಅವಕಾಶವಿದೆ ಎಂದು ಹೇಳಿದರು.

ಸಮುದಾಯವು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸದೃಢವಾಗುತ್ತದೆ ಎಂದ ಅವರು, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ನೇತೃತ್ವದಲ್ಲಿ ಮೂವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಾಗುವುದು ಎಂದರು. ಬಿಲ್ಲವ/ಈಡಿಗ ಮತದಾರರನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಈ ಬೆಳವಣಿಗೆ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ.

ಹಿಂದೊಮ್ಮೆ ಹಿಂದುತ್ವದ ಪೋಸ್ಟರ್ ಬಾಯ್ ಎಂದು ಕಣಕ್ಕಿಳಿದಿದ್ದ ಸುರತ್ಕಲ್ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಲಾಗಿತ್ತಾದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಈಗ ಬಿಜೆಪಿ ಇಲ್ಲ. ಬಿಎಲ್‌ಪಿ, ಬಿಎಲ್ ಸಂತೋಷ್ ಪಕ್ಷ ಮತ್ತು ಬಿಎಸ್‌ಪಿ, ಬಿಎಸ್ ಯಡಿಯೂರಪ್ಪ ಪಕ್ಷವಾಗಿ ಮಾರ್ಪಟ್ಟಿದೆ ಎಂದರು. ನಾನು ಬ್ರಾಹ್ಮಣ, ಬಂಟ, ಒಕ್ಕಲಿಗ ಆಗಿದ್ದಿದ್ರೆ ನಿಸ್ಸಂದೇಹವಾಗಿ ಟಿಕೆಟ್ ಸಿಗುತ್ತಿತ್ತು. ಆದರೆ ನಾನು ಶೂದ್ರನಾಗಿ ಹುಟ್ಟಿದ್ದೇನೆ ಅದಕ್ಕೆ ಟಿಕೆಟ್ ನೀಡಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT