ಜಯಪ್ರಕಾಶ್ ಹೆಗ್ಡೆ ಮತ್ತು ಕೋಟಾ ಶ್ರೀನಿವಾಸ ಪೂಜಾರಿ
ಜಯಪ್ರಕಾಶ್ ಹೆಗ್ಡೆ ಮತ್ತು ಕೋಟಾ ಶ್ರೀನಿವಾಸ ಪೂಜಾರಿ 
ರಾಜಕೀಯ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಬಿಜೆಪಿ ಗೆಲುವಿನ ನಾಗಾಲೋಟಕ್ಕೆ ಜಯಪ್ರಕಾಶ್ ಹೆಗ್ಡೆ ಬ್ರೇಕ್?

Shilpa D

ಉಡುಪಿ: ಈ ಬಾರಿಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಪ್ರಚಾರದ ವೇಳೆ ಸ್ಥಳೀಯ ಸಮಸ್ಯೆಗಳು ಹೆಚ್ಚು ಸದ್ದು ಮಾಡದಿದ್ದರೂ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಎರಡು ಪಕ್ಷಗಳ ಕಸರತ್ತು ನಡೆಸುತ್ತಿವೆ.

2004 ರ ಸಾರ್ವತ್ರಿಕ ಚುನಾವಣೆಯಿಂದಲೂ ಇಲ್ಲಿ ಬಿಜೆಪಿ ಗೆಲುವಿನ ನಾಗಾಲೋಟ ಮುಂದುವರಿಸಿದೆ. 2014 ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯೊಂದಿಗೆ ಹಿಂದುತ್ವದ ಅಂಶವು ಸೇರಿಕೊಂಡು ಕೇಸರಿ ಪಕ್ಷವು ಅಮೋಘ ವಿಜಯ ಸಾಧಿಸಿ ಈ ಕ್ಷೇತ್ರವು ಬಿಜೆಪಿಯ ಪ್ರಬಲ ಭದ್ರಕೋಟೆಯಾಗಿದೆ. 2012 ರಲ್ಲಿ ನಡೆದ ಉಪಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್‌ನ ಕೆ ಜಯಪ್ರಕಾಶ್ ಹೆಗ್ಡೆ ಗೆಲುವು ಸಾಧಿಸಿದ್ದರು.

2008ರಲ್ಲಿ ಡಿಲಿಮಿಟೇಷನ್ ನಡೆಯುವವರೆಗೆ ಉಡುಪಿ ಮತ್ತು ಚಿಕ್ಕಮಗಳೂರು ಪ್ರತ್ಯೇಕ ಲೋಕಸಭಾ ಕ್ಷೇತ್ರಗಳಾಗಿದ್ದವು. 1980, 1984, 1989, 1991 ಮತ್ತು 1996 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಆಸ್ಕರ್ ಫೆರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ನ ಭದ್ರಕೋಟೆಯನ್ನಾಗಿಸಿದ್ದರು. ನಂತರ 1998 ರಲ್ಲಿ ಬಿಜೆಪಿಯ ಐಎಂ ಜಯರಾಮ ಶೆಟ್ಟಿ ಗೆದ್ದು ಕಾಂಗ್ರೆಸ್ ಭದ್ರ ಕೋಟೆ ಮುರಿದರು. 1999 ರಲ್ಲಿ ಕಾಂಗ್ರೆಸ್‌ನ ವಿನಯ್ ಕುಮಾರ್ ಸೊರಕೆ ಈ ಸ್ಥಾನವನ್ನು ಮತ್ತೆ ವಶಪಡಿಸಿಕೊಂಡರು. ಆದರೆ, 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಮನೋರಮಾ ಮಧ್ವರಾಜ್ ಗೆಲುವು ಸಾಧಿಸಿದರು.

ಡಿಲಿಮಿಟೇಶನ್ ನಂತರ, 2009 ರಲ್ಲಿ ಹೊಸದಾಗಿ ರೂಪುಗೊಂಡ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಸದಾನಂದ ಗೌಡ ಗೆದ್ದರು. 2012 ರ ಉಪಚುನಾವಣೆಯಲ್ಲಿ, ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ ಸ್ಥಾನವನ್ನು ಗೆದ್ದರು, 2014 ಮತ್ತು 2019ರಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಭಾರೀ ಮತಗಳ ಅಂತರದಿಂದ ಗೆದ್ದರು. ಹಿಂದಿನ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿತ್ತು.

1977, 1980, 1984, 1989 ಮತ್ತು 1991 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದನ್ನು ಚುನಾವಣಾ ಇತಿಹಾಸವು ತೋರಿಸುತ್ತದೆ. ಜನತಾ ದಳದ ಬಿಎಲ್ ಶಂಕರ್ ಅವರು 1996 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದರು. ನಂತರ 1998, 1999 ಮತ್ತು 2004 ರ ಚುನಾವಣೆಗಳಲ್ಲಿ ಬಿಜೆಪಿಯ ಶ್ರೀಕಂಠಪ್ಪ ವಿಜಯಶಾಲಿಯಾದರು. 1978 ರ ಅಕ್ಟೋಬರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಸ್ಪರ್ಧಿಸಿದಾಗ ಚಿಕ್ಕಮಗಳೂರು ದೇಶ ಮತ್ತು ವಿದೇಶಗಳಿಂದ ದೊಡ್ಡ ಪ್ರಮಾಣದ ಮಾಧ್ಯಮದ ವ್ಯಕ್ತಿಗಳನ್ನು ಸೆಳೆಯಿತು, ಅದು ಅವರಿಗೆ ರಾಜಕೀಯ ಮರುಹುಟ್ಟು ನೀಡಿತು.

ಆದರೆ 2024ರ ಲೋಕಸಭೆ ಚುನಾವಣೆ ವೇಳೆಗೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಮತ್ತು ನಿರುದ್ಯೋಗ ಸಮಸ್ಯೆಗಳು ಭಾರೀ ಸದ್ದು ಮಾಡುತ್ತಿವೆ. ವಿದ್ಯಾವಂತ ಯುವಕರು ಗಲ್ಫ್ ದೇಶಗಳು ಮತ್ತು ವಿದೇಶಗಳಿಗೆ ಮತ್ತು ಮೆಟ್ರೋಪಾಲಿಟನ್ ನಗರಗಳಿಗೆ ಉದ್ಯೋಗದ ಹುಡುಕಾಟದಲ್ಲಿ ವಲಸೆ ಹೋಗುತ್ತಿದ್ದಾರೆ. ಪರಿಸರ ಸ್ನೇಹಿ ಕೈಗಾರಿಕೆಗಳನ್ನು ಪ್ರಾರಂಭಿಸದಿರುವುದು ಪ್ರಮುಖ ಸಮಸ್ಯೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಕಾಫಿ ಮತ್ತು ಅಡಿಕೆ ಬೆಳೆಗಾರರ ಹಿತಾಸಕ್ತಿಯೇ ಚುನಾವಣಾ ವಿಷಯವಾಗಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕ್ಷೇತ್ರದ ಅಭಿವೃದ್ಧಿಯ ಭರವಸೆ ನೀಡಿ ಮತದಾರರನ್ನು ಓಲೈಸುತ್ತಿದ್ದರೆ, ಕಾಂಗ್ರೆಸ್‌ನ ಕೆ.ಜಯಪ್ರಕಾಶ ಹೆಗ್ಡೆ, ಸಮಸ್ಯೆ ಬಗೆಹರಿಸುವ ಸಾಮರ್ಥ್ಯ ಹೊಂದಿರುವ ನಾಯಕರನ್ನು ಆಯ್ಕೆ ಮಾಡಬೇಕು.

ಮತದಾರರು ಮತ ಚಲಾಯಿಸುವಾಗ ಸ್ಥಳೀಯರ ಮತ್ತು ಹೊರಗಿನವರ ನಡುವಿನ ವ್ಯತ್ಯಾಸವನ್ನು ಪರಿಗಣಿಸಬೇಕು ಎಂದು ಹೇಳಿದ್ದಾರೆ. ಅಭಿವೃದ್ಧಿ ಮತ್ತು ಮೋದಿ ಅಲೆಯ ಮೇಲೆ ಸವಾರಿ ಮಾಡುವ ಮೂಲಕ ಬಿಜೆಪಿ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೂ, ಬಿಜೆಪಿಗೆ ಕಠಿಣ ಹೋರಾಟ ನೀಡಲು ಕಾಂಗ್ರೆಸ್ ಸಂಪನ್ಮೂಲಗಳನ್ನು ಸಂಗ್ರಹಿಸುತ್ತಿದೆ ಎಂದು ಹೇಳಲಾಗುತ್ತಿದೆ.

SCROLL FOR NEXT