ದಿಂಗಾಲೇಶ್ವರ ಸ್ವಾಮೀಜಿ-ಪ್ರಹ್ಲಾದ್ ಜೋಶಿ 
ರಾಜಕೀಯ

ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀ ವಿರೋಧ: ಸ್ವಾಮೀಜಿ ಹಿಂದೆ ಕಾಂಗ್ರೆಸ್ ಕೈವಾಡ?

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸಲು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸಲು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ, ಜೋಶಿ ಅವರು ಇತರ ಸಮುದಾಯಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಅವರ ಧಾರವಾಡದಿಂದ ಜೋಶಿ ಸ್ಪರ್ಧಿಸದಂತೆ ವಿರೋಧಿಸುತ್ತಿದ್ದಾರೆ. ಕೆಲವು ಸ್ವಾಮೀಜಿಗಳು ದಿಂಗಾಲೇಶ್ವರ ಶ್ರೀಗಳೊಂದಿಗೆ ಕೈಜೋಡಿಸಿದ್ದರು, ನಂತರ ತಮ್ಮ ಬೆಂಬಲ ಹಿಂತೆಗೆದುಕೊಂಡರು.

ಇಡೀ ಲಿಂಗಾಯತ ಸಮುದಾಯ ಜೋಶಿ ಅವರ ಜೊತೆಗಿದೆ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದು, ಈ ದಿಢೀರ್ ವಿರೋಧದ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ, ಪಕ್ಷವು ಚುನಾವಣೆಯಲ್ಲಿ ಸೋಲುವ ಭಯದಲ್ಲಿದೆ. ಹೀಗಾಗಿ ದಿಂಗಾಲೇಶ್ವರ ಶ್ರೀಗಳನ್ನು ಬಿಜೆಪಿ ವಿರುದ್ಧ ಎತ್ತಿ ಕಟ್ಟುವ ಕೆಲಸ ನಡೆಯುತ್ತಿದೆ ಎಂದು ದೂರಿದ್ದಾರೆ.

ಜೋಶಿ ಸ್ಪರ್ಧೆಗೆ ಮೊದಲು ಯಾವ ಅಭ್ಯಂತರಲಿಲ್ಲ, ಆದರೆ ಇದ್ದಕ್ಕಿದ್ದಂತೆ ಕೆಲವು ಬೆಳವಣಿಗೆಗಳು ನಡೆದಿವೆ. ಲಿಂಗಾಯತ ಮುಖಂಡ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಗೊಂದಲ ಸೃಷ್ಟಿಸಬೇಡಿ ಎಂದು ಶ್ರೀಗಳಿಗೆ ಮನವಿ ಮಾಡಿದ್ದಾರೆ ಎಂದು ಎಂದು ಬಿಜೆಪಿ ಮುಖಂಡ ಮೋಹನ್ ರಾಮದುರ್ಗ ತಿಳಿಸಿದ್ದಾರೆ.

ನಾವು ರಾಜ್ಯದ ಇತರ ಭಾಗಗಳಲ್ಲಿ ಇದೇ ಸಮಸ್ಯೆಗಳನ್ನು ಅನುಭವಿಸಿದ್ದೇವೆ. ಆರೋಪ ನಿಜವೇ ಆಗಿದ್ದರೆ, ಇತರ ಶ್ರೀಗಳು ತಮ್ಮ ವಿರೋಧವನ್ನು ಹಿಂಪಡೆದುಕೊಂಡು ಪ್ರಹ್ಲಾದ್ ಜೋಶಿ ಅವರನ್ನು ಅಭ್ಯರ್ಥಿಯನ್ನಾಗಿ ಏಕೆ ಒಪ್ಪಿಕೊಂಡಿದ್ದಾರೆ? ಅಭ್ಯರ್ಥಿ ಅಥವಾ ರಾಜಕೀಯ ಪಕ್ಷವನ್ನು ನಿರ್ಣಯಿಸುವುದು ಮಠಾಧೀಶರ ಕೆಲಸವಲ್ಲ, ಆದರೆ ಮತದಾರರ ಕರ್ತವ್ಯ ಎಂದು ಕೆಲವು ಸ್ವಾಮೀಜಿಗಳು ಸ್ಪಷ್ಟಪಡಿಸಿದ್ದಾರೆ ಎಂದು ರಾಮದುರ್ಗ ಹೇಳಿದರು.

ಅನೇಕ ಸ್ವಾಮೀಜಿಗಳು ಒಂದೇ ಅಭಿಪ್ರಾಯವನ್ನು ಹೊಂದಿದ್ದಾರೆ ಆದರೆ ಮುಕ್ತವಾಗಿ ಹೊರಬರಲು ಚಿಂತಿತರಾಗಿದ್ದಾರೆ. ಈಗಲ್ಲದಿದ್ದರೆ ಭವಿಷ್ಯದಲ್ಲಿ ಸತ್ಯ ಹೊರಬೀಳುತ್ತದೆ ಮತ್ತು ಜನರೂ ಹೇಳುತ್ತಾರೆ. ನಾವು ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರಿಂದ ಪ್ರೇರಿತರಾಗಿಲ್ಲ, ಅಭ್ಯರ್ಥಿಯ ವಿರುದ್ಧ ನಮಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಆದರೆ ನಾವು ಸಮುದಾಯದ ಧ್ವನಿಯನ್ನು ಸಹ ಕೇಳಬೇಕಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT