ಕೆ. ವೆಂಕಟೇಶ್ 
ರಾಜಕೀಯ

ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ: ಸಚಿವ ಕೆ ವೆಂಕಟೇಶ್

ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಅವರೇ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿ ಯದುವೀರ್ ಅವರನ್ನ ನಿಲ್ಲಿಸಿದ್ದಾರೆ ಎಂದು ಸಚಿವ ಕೆ.ವೆಂಕಟೇಶ್ ಅವರು ಮಂಗಳವಾರ ಆರೋಪಿಸಿದ್ದಾರೆ.

ಮೈಸೂರು: ನಮ್ಮ ಸಮಾಜದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿ ಯದುವೀರ್ ಒಡೆಯರ್ ​​ಗೆ ಟಿಕೆಟ್ ಕೊಟ್ಟಿದ್ದಾರೆ. ಯದುವೀರ್ ಹೆಸರು ಇರಲೇ ಇಲ್ಲ. ಆದರೆ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ಅವರೇ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿ ಯದುವೀರ್ ಅವರನ್ನ ನಿಲ್ಲಿಸಿದ್ದಾರೆ ಎಂದು ಸಚಿವ ಕೆ.ವೆಂಕಟೇಶ್ ಅವರು ಮಂಗಳವಾರ ಆರೋಪಿಸಿದ್ದಾರೆ.

ಇಂದು ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್​​ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯ, ಹಾಸನಕ್ಕೆ ಅನುಕೂಲವಾಗುತ್ತೆ ಅಂತ ಅವರ ಸ್ವಾರ್ಥಕ್ಕಾಗಿ ಯದುವೀರ್​​ ಒಡೆಯರ್ ಅವರನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ ಎಂದು ಹೇಳಿದರು.

ನಾನು ದೇವೇಗೌಡರ ಹತ್ತಿರದ ಸಂಬಂಧಿ. ಅವರು ಸ್ವಾರ್ಥಿಗಳು ಎಂಬ ಕಾರಣಕ್ಕೆ ನಾನು ದೂರ ಉಳಿದೆ. ನಾನು ರಾಜಕೀಯ ಸಾಕು, ಬಿಡಬೇಕು ಅಂದ್ಕೊಂಡಿದ್ದೆ. ಆದರೆ ಸಿಎಂ ಸಿದ್ದರಾಮಯ್ಯ ನನ್ನನ್ನು ರಾಜಕಾರಣದಲ್ಲಿ ಉಳಿಸಿಕೊಂಡರು ಎಂದರು.

ನಾನು ಯಾವ ಜಾತಿಗೆ ಸೇರಿದ್ದಿನೋ, ಲಕ್ಷ್ಮಣ್ ಕೂಡ ಅದೇ ಜಾತಿಯವರು. ಪ್ರತಾಪ್ ಸಿಂಹ ಇವರನ್ನ ಒಕ್ಕಲಿಗರಲ್ಲ ಅಂದರು. ಆದರೆ ಲಕ್ಷ್ಮಣ್​ ಅವರು ತಮ್ಮ ಕುಟುಂಬ ಸದಸ್ಯರ ಬಗ್ಗೆ ಮಾಹಿತಿಯನ್ನೇ ನೀಡಿದ್ದರು. ಹಾಗಾಗಿ ನಿಮಗೆ ಯಾವುದೇ ಸಂಶಯ ಬೇಡ ಅವರು ಒಕ್ಕಲಿಗರೇ. ಪ್ರತಾಪ್ ಸಿಂಹ ಬೇರೆ ಕಡೆಯಿಂದ ಬಂದವರು. ಲಕ್ಷ್ಮಣ್ ಇಲ್ಲಿಯವರೆ, ಮೈಸೂರಿನವರೇ, ಮೈಸೂರಿನಲ್ಲೇ ನೆಲೆಸಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT