ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಮಪತ್ರ ಸಲ್ಲಿಕೆ  
ರಾಜಕೀಯ

ಮೈಸೂರು-ಕೊಡಗು ಜಿಲ್ಲೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ; ಬೃಹತ್ ಮೆರವಣಿಗೆ

ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ ಚಾಮರಾಜ್ ಒಡೆಯರ್ ಬುಧವಾರ ಬಿಜೆಪಿ-ಜೆಡಿಎಸ್ ನ ರಾಜಕೀಯ ಮುಖಂಡರು, ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ ಚಾಮರಾಜ್ ಒಡೆಯರ್ ಬುಧವಾರ ಬಿಜೆಪಿ-ಜೆಡಿಎಸ್ ನ ರಾಜಕೀಯ ಮುಖಂಡರು, ತಮ್ಮ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮೈಸೂರು ಅರಮನೆಯ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಮೆರವಣಿಗೆ ಹೊರಟು ನಜರಬಾದ್ ಮಾರ್ಗವಾಗಿ ಸಿದ್ದಾರ್ಥ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದರು.

ಈ ಸಂದರ್ಭದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಕ್ಷೇತ್ರ ಚುನಾವಣಾ ಉಸ್ತುವಾರಿ ಡಾ ಸಿ ಎನ್ ಅಶ್ವಥ ನಾರಾಯಣ, ಶಾಸಕ ಟಿ ಎಸ್ ಶ್ರೀವತ್ಸ, ಜೆಡಿಎಸ್ ಶಾಸಕ ಜಿ ಡಿ ಹರೀಶ್ ಗೌಡ, ಮಾಜಿ ಶಾಸಕ ಕೆ ಜಿ ಬೋಪಯ್ಯ ಸಾಥ್ ನೀಡಿದರು.

ಮೈಸೂರಿನಲ್ಲಿಂದು ಬೃಹತ್ ರೋಡ್ ಶೋ ನಡೆಸಲಾಯಿತು. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲ್ಲಿಸಿ ಮತ್ತೊಮ್ಮೆ ಗೆಲ್ಲಿಸಿ ಎಂದು ನಾಯಕರು ಮತದಾರರಲ್ಲಿ ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ