ಜಗದೀಶ್ ಶೆಟ್ಟರ್  
ರಾಜಕೀಯ

ಬೆಳಗಾವಿ ಲೋಕಸಭೆ ಕ್ಷೇತ್ರ: ಮರಾಠಿ ಪಕ್ಷ MES ಸ್ಪರ್ಧೆಯಿಂದ ಮತ ವಿಭಜನೆ; ಬಿಜೆಪಿಯ ಶೆಟ್ಟರ್ ಗೆಲುವಿಗೆ ಅಡ್ಡಗಾಲು?

2021 ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ಅವರು ಗಳಿಸಿದ ಸುಮಾರು 1.16 ಲಕ್ಷ ಮತಗಳು ಬಿಜೆಪಿಗೆ ನಷ್ಟವನ್ನುಂಟುಮಾಡಿದವು.

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮರಾಠಿ ಸಮುದಾಯದ ಮತಗಳನ್ನು ಸೆಳೆಯುವ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪಾತ್ರ ನಿರ್ಣಾಯಕವಾಗಿದೆ. ಮರಾಠಿ ಸಮುದಾಯದ ಮತದಾರರು ಸಾಂಪ್ರದಾಯಿಕವಾಗಿ ಬಿಜೆಪಿ ಬೆಂಬಲಿಗರಾಗಿರುವುದರಿಂದ ಇದು ಕೇಸರಿ ಪಕ್ಷದ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು.

2021 ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ಅವರು ಗಳಿಸಿದ ಸುಮಾರು 1.16 ಲಕ್ಷ ಮತಗಳು ಬಿಜೆಪಿಗೆ ನಷ್ಟವನ್ನುಂಟುಮಾಡಿದವು, ಹಾಲಿ ಸಂಸದೆ ಮಂಗಳಾ ಅಂಗಡಿ ಸತೀಶ್ ಜಾರಕಿಹೊಳಿ ವಿರುದ್ಧ ಕೇವಲ 4,000 ಮತಗಳ ಅಂತರದಿಂದ ಗೆದ್ದಿದ್ದರು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎಂಇಎಸ್ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಧಕ್ಕೆ ತರಬಹುದು ಎನ್ನುತ್ತಾರೆ ಹಿರಿಯ ಮರಾಠಿ ಪತ್ರಕರ್ತ ಸಂಜಯ್ ಸೂರ್ಯವಂಶಿ.

ಎಂಇಎಸ್ ರಮಾಕಾಂತ್ ಕೊಂಡೂಸ್ಕರ್ ಅಥವಾ ಶುಭಂ ಶೆಲ್ಕೆ ಅವರಂತಹ ಜನಪ್ರಿಯ ನಾಯಕರನ್ನು ಕಣಕ್ಕಿಳಿಸಿದರೆ ಬಿಜೆಪಿ ಸಂಕಷ್ಟಕ್ಕೆ ಸಿಲುಕುವುದು ಖಚಿತ. ಆದರೆ ಸಮಿತಿಯು ಕಡಿಮೆ ಹೆಸರುವಾಸಿ ನಾಯಕನನ್ನು ಕಣಕ್ಕಿಳಿಸಿದರೆ ಮರಾಠಿ ಮತದಾರರು ಶೆಟ್ಟರ್ ಅವರ ಬೆನ್ನಿಗೆ ಬಲವಾಗಿ ನಿಲ್ಲಬಹುದು.

ಆದರೆ, ಶೆಟ್ಟರ್ ವಿರುದ್ಧ ಯಾವ ಅಭ್ಯರ್ಥಿ ಕಣಕ್ಕಿಳಿದರೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಎಂಇಎಸ್ ನಾಯಕತ್ವವು ಮಂಗಳವಾರ ಬೆಳಗಾವಿಯಲ್ಲಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಲು 32 ಸದಸ್ಯರ ಸಮಿತಿಯನ್ನು ರಚಿಸಿದೆ. ಮೊದಲ ದಿನವೇ ಮಾಜಿ ಮೇಯರ್ ದಿವಂಗತ ಸಂಭಾಜಿ ಪಾಟೀಲ್ ಅವರ ಸೊಸೆ ಸಾಧನಾ ಪಾಟೀಲ್ ಅರ್ಜಿ ಸಲ್ಲಿಸಿದ್ದರು. MES ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೊದಲು ಅನೇಕ ಇತರ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT