ಜಗದೀಶ್ ಶೆಟ್ಟರ್  
ರಾಜಕೀಯ

ಬೆಳಗಾವಿ ಲೋಕಸಭೆ ಕ್ಷೇತ್ರ: ಮರಾಠಿ ಪಕ್ಷ MES ಸ್ಪರ್ಧೆಯಿಂದ ಮತ ವಿಭಜನೆ; ಬಿಜೆಪಿಯ ಶೆಟ್ಟರ್ ಗೆಲುವಿಗೆ ಅಡ್ಡಗಾಲು?

2021 ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ಅವರು ಗಳಿಸಿದ ಸುಮಾರು 1.16 ಲಕ್ಷ ಮತಗಳು ಬಿಜೆಪಿಗೆ ನಷ್ಟವನ್ನುಂಟುಮಾಡಿದವು.

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮರಾಠಿ ಸಮುದಾಯದ ಮತಗಳನ್ನು ಸೆಳೆಯುವ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪಾತ್ರ ನಿರ್ಣಾಯಕವಾಗಿದೆ. ಮರಾಠಿ ಸಮುದಾಯದ ಮತದಾರರು ಸಾಂಪ್ರದಾಯಿಕವಾಗಿ ಬಿಜೆಪಿ ಬೆಂಬಲಿಗರಾಗಿರುವುದರಿಂದ ಇದು ಕೇಸರಿ ಪಕ್ಷದ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು.

2021 ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ಅವರು ಗಳಿಸಿದ ಸುಮಾರು 1.16 ಲಕ್ಷ ಮತಗಳು ಬಿಜೆಪಿಗೆ ನಷ್ಟವನ್ನುಂಟುಮಾಡಿದವು, ಹಾಲಿ ಸಂಸದೆ ಮಂಗಳಾ ಅಂಗಡಿ ಸತೀಶ್ ಜಾರಕಿಹೊಳಿ ವಿರುದ್ಧ ಕೇವಲ 4,000 ಮತಗಳ ಅಂತರದಿಂದ ಗೆದ್ದಿದ್ದರು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎಂಇಎಸ್ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಧಕ್ಕೆ ತರಬಹುದು ಎನ್ನುತ್ತಾರೆ ಹಿರಿಯ ಮರಾಠಿ ಪತ್ರಕರ್ತ ಸಂಜಯ್ ಸೂರ್ಯವಂಶಿ.

ಎಂಇಎಸ್ ರಮಾಕಾಂತ್ ಕೊಂಡೂಸ್ಕರ್ ಅಥವಾ ಶುಭಂ ಶೆಲ್ಕೆ ಅವರಂತಹ ಜನಪ್ರಿಯ ನಾಯಕರನ್ನು ಕಣಕ್ಕಿಳಿಸಿದರೆ ಬಿಜೆಪಿ ಸಂಕಷ್ಟಕ್ಕೆ ಸಿಲುಕುವುದು ಖಚಿತ. ಆದರೆ ಸಮಿತಿಯು ಕಡಿಮೆ ಹೆಸರುವಾಸಿ ನಾಯಕನನ್ನು ಕಣಕ್ಕಿಳಿಸಿದರೆ ಮರಾಠಿ ಮತದಾರರು ಶೆಟ್ಟರ್ ಅವರ ಬೆನ್ನಿಗೆ ಬಲವಾಗಿ ನಿಲ್ಲಬಹುದು.

ಆದರೆ, ಶೆಟ್ಟರ್ ವಿರುದ್ಧ ಯಾವ ಅಭ್ಯರ್ಥಿ ಕಣಕ್ಕಿಳಿದರೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಎಂಇಎಸ್ ನಾಯಕತ್ವವು ಮಂಗಳವಾರ ಬೆಳಗಾವಿಯಲ್ಲಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಲು 32 ಸದಸ್ಯರ ಸಮಿತಿಯನ್ನು ರಚಿಸಿದೆ. ಮೊದಲ ದಿನವೇ ಮಾಜಿ ಮೇಯರ್ ದಿವಂಗತ ಸಂಭಾಜಿ ಪಾಟೀಲ್ ಅವರ ಸೊಸೆ ಸಾಧನಾ ಪಾಟೀಲ್ ಅರ್ಜಿ ಸಲ್ಲಿಸಿದ್ದರು. MES ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೊದಲು ಅನೇಕ ಇತರ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT