ಯಡಿಯೂರಪ್ಪ online desk
ರಾಜಕೀಯ

ಚಿತ್ರದುರ್ಗ: ಯಡಿಯೂರಪ್ಪ ಸಂಧಾನ ಸಕ್ಸಸ್; ಶಾಂತವಾದ ಚಂದ್ರಪ್ಪ; ಕಾರಜೋಳ ಪರ ತಂದೆ-ಮಗ ಪ್ರಚಾರ

ಪಕ್ಷದ ಕೆಲಸ ಮಾಡುತ್ತೇವೆ, ಅದು ಅನಿವಾರ್ಯ, ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇವೆ. ಪುತ್ರನಿಗೆ ಪಕ್ಷದಲ್ಲಿ ಮುಂದೆ ಉತ್ತಮ ಅವಕಾಶ ಕೊಡುವ ವಿಶ್ವಾಸವಿದೆ ಎಂದು ಶಾಸಕ ಚಂದ್ರಪ್ಪ ಹೇಳಿದರು.

ಚಿತ್ರದುರ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮದ್ಯ ಪ್ರವೇಶದಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಕಗ್ಗಂಟಾಗಿದ್ದ ಸಮಸ್ಯೆ ಬಗೆಹರಿದಿದೆ. ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರನಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಚಂದ್ರಪ್ಪನವರ ಪುತ್ರ ರಘುಚಂದನ್ ಲೋಕಸಭೆಗೆ ಕಣಕ್ಕಿಳಿಯಲು ತಯಾರಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ನಡೆದ ಸಭೆಯ ಬಳಿಕ ಶಾಸಕ ಚಂದ್ರಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷದ ಕೆಲಸ ಮಾಡುತ್ತೇವೆ, ಅದು ಅನಿವಾರ್ಯ. ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇವೆ. ಪುತ್ರನಿಗೆ ಪಕ್ಷದಲ್ಲಿ ಮುಂದೆ ಉತ್ತಮ ಅವಕಾಶ ಕೊಡುವ ವಿಶ್ವಾಸವಿದೆ ಎಂದು ಹೇಳಿದರು.

ಯಡಿಯೂರಪ್ಪ ಮತ್ತು ವಿಜಯೇಂದ್ರ ನಮಗೆ ಯಾವತ್ತೂ ಅನ್ಯಾಯ ಮಾಡಿದವರಲ್ಲ. ಹಿರಿಯ ನಾಯಕರಾದ ಯಡಿಯೂರಪ್ಪನವರು ನಮ್ಮ ಜತೆ, ನಮ್ಮ ಬೆಂಬಲಿಗರ ಜತೆ ಮಾತನಾಡಿದ್ದಾರೆ. ಅವರ ಮಾತಿಗೆ ಗೌರವ, ಮರ್ಯಾದೆ ಕೊಟ್ಟು ನನ್ನ ಮಗ ಪಕ್ಷೇತರ ಸ್ಪರ್ಧೆ ಮಾಡಲ್ಲ. ನಾವು ಪಕ್ಷದ ಪರ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಎರಡು ದಿನಗಳ ಹಿಂದೆ ಚಿತ್ರದುರ್ಗದಲ್ಲಿ ತಂದೆ-ಮಗ ಇಬ್ಬರೂ ‘ಗೋ-ಬ್ಯಾಕ್ ಕಾರಜೋಳ’ ಅಭಿಯಾನ ಆರಂಭಿಸಿದ್ದರು. ಚಿತ್ರದುರ್ಗ ಕ್ಷೇತ್ರದಲ್ಲಿ ಕಾರಜೋಳ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ರಘುಚಂದನ್ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಯುದ್ಧ ಇನ್ನಷ್ಟು ಕಾಲ ಮುಂದುವರಿದರೆ ಭಾರತಕ್ಕೆ 'ಗಂಭೀರ ಪರಿಣಾಮಗಳು' ಸನ್ನಿಹಿತ: ಪ್ರಧಾನಿ ಮೋದಿ

'ಮಿಲಿಟರಿ ಕಾರ್ಯಾಚರಣೆ ಮಾಡೋಣ ಎಂದಿದ್ದು ನೀವು': ರಕ್ಷಣಾ ಕಾರ್ಯದರ್ಶಿ ಹೆಗೆತ್ಸ್‌ ಮೇಲೆಯೇ ಯುದ್ಧದ ಹೊಣೆ ಹೊರಿಸಿದ ಡೊನಾಲ್ಡ್ ಟ್ರಂಪ್!

ಸುಪ್ರೀಂ ಕೋರ್ಟ್ 'ದಯಾ ಮರಣ'ಕ್ಕೆ ಅನುಮತಿ ನೀಡಿದ್ದ ಹರೀಶ್ ರಾಣಾ ನಿಧನ!

ಅಮೆರಿಕ ಜೊತೆ ಮಾತುಕತೆಗೆ ಮೊಜ್ತಬಾ ಖಮೇನಿ ಸಿದ್ಧ: ಇಸ್ರೇಲ್ ಮಾಧ್ಯಮ

West Asia Conflict: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

SCROLL FOR NEXT