ಸಿ ಎನ್ ಮಂಜುನಾಥ್ 
ರಾಜಕೀಯ

ಲೋಕಸಭೆ ಚುನಾವಣೆ: ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ V/s 4 ಜನ ಮಂಜುನಾಥ್!

ಬೆಂಗಳೂರು ಗ್ರಾಮಾಂತರದಲ್ಲಿ ತಮ್ಮ ವಿರುದ್ಧ ಮಂಜುನಾಥ್ ಎಂಬ ಅನೇಕ ಹೆಸರುಗಳು ಕಣದಲ್ಲಿದ್ದು, ಇದು ಪ್ರತಿಸ್ಪರ್ಧಿ ಪಾಳೆಯದ ಹಳೆಯ ತಂತ್ರ ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ.

ರಾಮನಗರ: ರಾಜ್ಯದಲ್ಲಿ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ತಮ್ಮ ವಿರುದ್ಧ ಮಂಜುನಾಥ್ ಎಂಬ ಅನೇಕ ಹೆಸರುಗಳು ಕಣದಲ್ಲಿದ್ದು, ಇದು ಪ್ರತಿಸ್ಪರ್ಧಿ ಪಾಳೆಯದ ಹಳೆಯ ತಂತ್ರ ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎನ್ ಮಂಜುನಾಥ್ ಅವರು, ಇವು ಬಹಳ ಹಳೆಯ ತಂತ್ರಗಳು. ಇದರಿಂದ ಕೆಲವರು ಭಯಭೀತರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಡಾ.ಮಂಜುನಾಥ್‌ ಅವರಿಗೆ ಮಂಜುನಾಥ್ ಎಂಬ ಹೆಸರಿನ ಹಲವು ಪ್ರತಿಸ್ಪರ್ಧಿಗಳಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವರಾದ ಮಂಜುನಾಥ ಸಿ ಎನ್ ಎಂಬ ವ್ಯಕ್ತಿ ಸಹ ಕಣದಲ್ಲಿದ್ದು, ಅವರ ತಂದೆಯ ಹೆಸರು ನಂಜುಂಡಪ್ಪ.

ಡಾ. ಮಂಜುನಾಥ್ ಅವರ ತಂದೆಯ ಹೆಸರು ನಂಜಪ್ಪ. ಈ ಇಬ್ಬರು ಅಭ್ಯರ್ಥಿಗಳ ಪಾಸ್‌ಪೋರ್ಟ್ ಸೈಜಿನ ಫೋಟೋಗಳು ಕಪ್ಪು ಬ್ಲೇಜರ್ ಮತ್ತು ಟೈನಲ್ಲಿ ಇವೆ.

ಇತರ ಹೆಸರುಗಳೆಂದರೆ ಬೆಂಗಳೂರಿನ ಪಾಪರೆಡ್ಡಿಪಾಳ್ಯದ ಮಂಜುನಾಥ್ ಕೆ, ಬೆಂಗಳೂರಿನ ರಾಜಾಜಿನಗರದ ಎನ್ ಮಂಜುನಾಥ್ ಮತ್ತು ಬೆಂಗಳೂರಿನ ಮೂಡಲಪಾಳ್ಯದ ಶಕ್ತಿ ಗಾರ್ಡನ್‌ನ ಮಂಜುನಾಥ್ ಸಿ ಎಂಬುವವರು ಡಾ. ಮಂಜುನಾಥ್ ಅವರ ವಿರುದ್ಧ ಸ್ಪರ್ಧಿಸಿದ್ದಾರೆ.

ಜನ ಬುದ್ಧಿವಂತರು, ವಿದ್ಯಾವಂತರು ಮತ್ತು ಚಿಂತನಶೀಲರು. ನಾನು ರಾಷ್ಟ್ರೀಯ ಪಕ್ಷ ಬಿಜೆಪಿಯಿಂದ ಕಮಲದ ಚಿಹ್ನೆಯ ಮೇಲೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರಿಗೆ ತಿಳಿದಿದೆ ಎಂದು ಮಂಜುನಾಥ್ ಹೇಳಿದರು.

ಒಂದೇ ಹೆಸರಿನ ಹಲವು ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುವ ಸಾಧ್ಯತೆಗಳನ್ನು ತಳ್ಳಿಹಾಕಿದ ಡಾ. ಮಂಜುನಾಥ್ ಅವರು, ನಮ್ಮ ಲೆಕ್ಕಾಚಾರದ ಪ್ರಕಾರ, ನಾವು ಅವರಿಗಿಂತ(ಕಾಂಗ್ರೆಸ್) ಮುಂದಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT