ಸಿಟಿ ರವಿ 
ರಾಜಕೀಯ

ಕೇರಳದಂತೆ ನಾವು ಸಹ ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲದಿದ್ದರೆ ಕಾಶ್ಮೀರದಲ್ಲಿ ಮತ್ತೆ 370 ನೇ ವಿಧಿ ಹೇರುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ನಂತರ ಮತ್ತೆ ಸೈನಿಕರ ಮೇಲೆ ಕಲ್ಲು ತೂರಾಟ ಆರಂಭವಾಗುತ್ತದೆ. ಅವರು ಮತ್ತೆ ಬಾಬ್ರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಮತ್ತೆ ಎಲ್ಲಾ ಯೋಜನೆಗಳು ಮುಗಿಯುತ್ತವೆ ಎಂದು ಹೇಳಿದರು.

ಕಾಂಗ್ರೆಸ್ ಯಾವಾಗಲೂ ಸೈನಿಕರ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ಸೈನಿಕರ ಮೇಲೆ ಅನುಮಾನ ವ್ಯಕ್ತಪಡಿಸುವವರು ಯಾರು? ಅಂತಹವರ ಬಗ್ಗೆ ನಾವು ಏನು ಹೇಳುತ್ತೇವೆ? ಪುಲ್ವಾಮಾ ದಾಳಿಗೆ ಯಾರು ಹೊಣೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸರ್ಜಿಕಲ್ ಸ್ಟ್ರೈಕ್ ನಿಂದ ಉಗ್ರರ ತರಬೇತಿ ಕೇಂದ್ರವನ್ನು ಧ್ವಂಸಗೊಳಿಸಲಾಯಿತು ಎಂಬುದು ನಮಗೆ ತಿಳಿದಿದೆ. ಪಾಕಿಸ್ತಾನ ಈ ವಿಚಾರಕ್ಕೆ ವಿಶ್ವಸಂಸ್ಥೆಯ ಮೊರೆ ಹೋಗಿತ್ತು.ಆಗಲೂ ಕಾಂಗ್ರೆಸ್‌ ಈ ವಿಚಾರದಲ್ಲಿ ಸಂಶಯ ವ್ಯಕ್ತಪಡಿಸಿತ್ತು. ಆ ಪಕ್ಷಕ್ಕೆ ಸನಾತನ ಧರ್ಮ ಮತ್ತು ಸೈನಿಕರ ಬಗ್ಗೆ ಅನುಮಾನವಿದೆ. ದೇಶಪ್ರೇಮಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಅವರು ಸದಾ ಅನುಮಾನ ವ್ಯಕ್ತಪಡಿಸುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT